ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಶಶಿಕಲಾ ತಂಡವನ್ನು ಪಕ್ಷದಿಂದ ಉಚ್ಛಾಟಿಸಿ: ಸಂಧಾನಕ್ಕೆ ಪನ್ನೀರ್ ಸೆಲ್ವಂ ಬಣದ ಏಕೈಕ ಷರತ್ತು!

ಎಐಎಡಿಎಂಕೆ ಪಕ್ಷದಿಂದ ಶಶಿಕಲಾ ಮತ್ತು ಅವರ ತಂಡವನ್ನು ಉಚ್ಛಾಟನೆ ಮಾಡಿದರೆ ಮಾತ್ರ ಸಂಧಾನಕ್ಕೆ ಸಿದ್ಧ ಎಂದು ಮಾಜಿ ಸಿಎಂ ಒ ಪನ್ನೀರ್ ಸೆಲ್ವಂ ಬಣ ಹೇಳಿದೆ ಎಂದು ಹೇಳಲಾಗುತ್ತಿದೆ.

ಚೆನ್ನೈ: ಎಐಎಡಿಎಂಕೆ ಪಕ್ಷದಿಂದ ಶಶಿಕಲಾ ಮತ್ತು ಅವರ ತಂಡವನ್ನು ಉಚ್ಛಾಟನೆ ಮಾಡಿದರೆ ಮಾತ್ರ ಸಂಧಾನಕ್ಕೆ ಸಿದ್ಧ ಎಂದು ಮಾಜಿ ಸಿಎಂ ಒ ಪನ್ನೀರ್ ಸೆಲ್ವಂ ಬಣ ಹೇಳಿದೆ ಎಂದು ಹೇಳಲಾಗುತ್ತಿದೆ.

ಚೆನ್ನೈನಲ್ಲಿ ಕಳೆದ ರಾತ್ರಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆ ಬಳಿಕ ಎಐಎಡಿಎಂಕೆ ಪಕ್ಷವನ್ನು ಮತ್ತೆ ಒಟ್ಟು ಗೂಡಿಸಲು ನಡೆಸಲಾಗುತ್ತಿರುವ ಸಂಧಾನ ಮಾತುಕತೆ ನಿರ್ಣಾಯಕ ಘಟ್ಟ ತಲುಪಿದ್ದು, ಇತ್ತ ಒ ಪನ್ನೀರ್ ಸೆಲ್ವಂ ಬಣದ  ಶಾಸಕರು ಸಂಧಾನಕ್ಕಾಗಿ ಏಕೈಕ ಷರತ್ತು ವಿಧಿಸಿದ್ದು, ಶಶಿಕಲಾ ಮತ್ತು ಅವರ ತಂಡವನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಭವಿಷ್ಯದಲ್ಲಿ ಎಂದಿಗೂ ಅವರನ್ನು ಪಕ್ಷದೊಳಗೆ ಬಿಟ್ಟುಕೊಳ್ಳದಿರುವ ಭರವಸೆ ನೀಡಿದರೆ ಮಾತ್ರ ತಾವು  ಸಂಧಾನಕ್ಕೆ ಸಿದ್ಧ ಎಂಬ ಷರತ್ತು ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.

ಪನ್ನೀರ್ ಸೆಲ್ವಂ ಬಣದೊಂದಿಗೆ ಸಂಧಾನ ಮಾತುಕತೆಗಾಗಿಯೇ ಸಿಎಂ ಪಳನಿ ಸ್ವಾಮಿ 9 ಮಂದಿಯ ಹಿರಿಯ ಮುಖಂಡರ ತಂಡವನ್ನು ರಚಿಸಲಾಗಿದ್ದು, ಈ ತಂಡದೊಂದಿಗಿನ ಮಾತುಕತೆ ವೇಳೆ ಪನ್ನೀರ್ ಸೆಲ್ವಂ ಬಣ  ಇಂತಹುದೊಂದು ಷರತ್ತು ವಿಧಿಸಿದೆ ಎಂದು ತಿಳಿದುಬಂದಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ಮತ್ತು ತಮಿಳುನಾಡು ಸರ್ಕಾರದಲ್ಲಿ ಪ್ರಭಾವ ಹೊಂದಿರುವ ಶಶಿಕಲಾ ಅವರನ್ನು ಕೂಡಲೇ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೆಳಗಿಳಿಸಬೇಕು. ಅಷ್ಟು ಮಾತ್ರವಲ್ಲದೇ ಅವರನ್ನು  ಮತ್ತು ಅವರ ತಂಡವನ್ನು ಪಕ್ಷದಿಂದ ಉಚ್ಠಾಟಿಸ ಬೇಕು ಎಂದು ಪನ್ನೀರ್ ಸೆಲ್ವಂ ಬಿಗಿ ಪಟ್ಟು ಹಿಡಿದಿದ್ದಾರೆ. ಸಂಧಾನಕ್ಕೂ ಮುನ್ನವೇ ಇದು ನಡೆಯಬೇಕಿದ್ದು, ಎಐಎಡಿಎಂಕೆಯಿಂದ ಶಶಿಕಲಾ ಬಣದ ಉಚ್ಠಾಟನೆ ಬಳಿಕವಷ್ಟೇ ತಾವು  ಸಂಧಾನ ಮಾತುಕತೆಗೆ ಬರುವುದಾಗಿ ಪನ್ನೀರ್ ಸೆಲ್ವಂ ಬಣ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT