ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಇಂಧನ ಉಳಿಸಿ ಎಂದು ಪ್ರಧಾನಿ ಕರೆ ಕೊಟ್ಟರೇ ಹೊರತು, ಪಂಪ್ ಬಂದ್ ಮಾಡಿ ಎಂದು ಅಲ್ಲ: ಧರ್ಮೇಂದ್ರ ಪ್ರಧಾನ್

ಮುಂದಿನ ತಿಂಗಳ 14ರಿಂದ ಪ್ರತಿ ಭಾನುವಾರ ಪೆಟ್ರೋಲ್‌ ಬಂಕ್ ಗಳನ್ನು ಮುಚ್ಚುವ ದಕ್ಷಿಣ ಭಾರತ ರಾಜ್ಯಗಳ ಪೆಟ್ರೋಲ್‌ ಬಂಕ್‌ ಮಾಲೀಕರ ಸಲಹೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ಇದರಿಂದ...

ನವದೆಹಲಿ: ಮುಂದಿನ ತಿಂಗಳ 14ರಿಂದ ಪ್ರತಿ ಭಾನುವಾರ ಪೆಟ್ರೋಲ್‌ ಬಂಕ್ ಗಳನ್ನು ಮುಚ್ಚುವ ದಕ್ಷಿಣ ಭಾರತ ರಾಜ್ಯಗಳ ಪೆಟ್ರೋಲ್‌ ಬಂಕ್‌ ಮಾಲೀಕರ ಸಲಹೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ಇದರಿಂದ  ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ತೈಲ ಸಚಿವಾಲಯ ಶುಕ್ರವಾರ ಅಭಿಪ್ರಾಯಪಟ್ಟಿದೆ.

ವಾರದಲ್ಲಿ ಒಂದು ದಿನ ಪೆಟ್ರೋಲ್ ಬಂಕ್ ಬಂದ್ ಮಾಡುವ ದಕ್ಷಿಣ ಭಾರತ ರಾಜ್ಯಗಳ ಪೆಟ್ರೋಲ್‌ ಬಂಕ್‌ ಮಾಲೀಕರ ಒಕ್ಕೂಟದ ಸಲಹೆಯನ್ನು ತಿರಸ್ಕರಿಸಿರುವ ಕೇಂದ್ರ ಸರ್ಕಾರ, ಬಂಕ್ ಬಂದ್ ಮಾಡುವುದರಿಂದ  ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ಹೇಳಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು, "ವಾರದಲ್ಲಿ ಒಂದು ದಿನ ಪೆಟ್ರೋಲ್‌, ಡೀಸೆಲ್‌ ಅನ್ನು ಬಳಕೆ ಮಾಡುವುದನ್ನು  ಕಡಿಮೆ ಮಾಡುವ ಮೂಲಕ ದೇಶ ಕಚ್ಚಾ ತೈಲದ ಆಮದನ್ನು ತಗ್ಗಿಸಬಹುದು. ಈ ಮೂಲಕ ದೇಶಕ್ಕೆ ಇಂಧನವನ್ನು ಉಳಿತಾಯ ಮಾಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ "ಮನ್‌ ಕಿ ಬಾತ್‌"ನಲ್ಲಿ ಹೇಳಿದ್ದಾರೆಯೇ ಹೊರತು,  ವಾರದಲ್ಲಿ ಒಂದು ದಿನ ಪೆಟ್ರೋಲ್‌ ಬಂಕ್‌ ಗಳನ್ನು ಮುಚ್ಚಲು ಅಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಈ ಕುರಿತಂತೆ ಸರಣಿ ಟ್ವೀಟ್‌ ಮಾಡಿರುವ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು, "ಅಲ್ಪ ಸಂಖ್ಯೆಯ ಪಂಪ್‌ ಗಳ ಈ ನಿರ್ಧಾರದಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ಹೀಗಾಗಿ ಒಕ್ಕೂಟದ  ಈ ಬೇಡಿಕೆಗೆ ಸಮ್ಮತಿಸುವ ಪ್ರಮೇಯವೇ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದೆಡೆ ದೇಶದಲ್ಲಿ ಶೇ.80ರಷ್ಟು (53,224) ಪೆಟ್ರೋಲ್‌ ಬಂಕ್ ಗಳನ್ನು ಹೊಂದಿರುವ ಇಂಡಿಯನ್‌ ಪೆಟ್ರೋಲಿಯಂ ಡೀಲರ್ ಅಸೋಸಿಯೇಷನ್‌, ಪಂಪ್‌ ಮುಚ್ಚುವ ಪ್ರಕ್ರಿಯೆಯಲ್ಲಿ ತಾನಿಲ್ಲ ಎಂದಿದೆ. ತಮಿಳುನಾಡು,  ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಪುದುಚೇರಿ, ಕರ್ನಾಟಕ, ಮಹಾರಾಷ್ಟ್ಯ ರಾಜ್ಯಗಳಲ್ಲಿ ಮೇ 14ರಿಂದ ಭಾನುವಾರಗಳಂದು ಪೆಟ್ರೋಲ್‌ ಬಂಕ್ ಗಳಿಗೆ ರಜೆ ನೀಡಲು ಅನುಮತಿ ನೀಡುವಂತೆ ಭಾರತದ ಪೆಟ್ರೋಲಿಯಂ ಡೀಲರ್‌ಗಳ ಒಕ್ಕೂಟ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಒಕ್ಕೂಟದ ನಿರ್ಧಾರಕ್ಕೆ ಕರ್ನಾಟಕದ ಡೀಲರ್‌ ಗಳು ಅಸಮ್ಮತಿ ಸೂಚಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT