ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಇಂಧನ ಉಳಿಸಿ ಎಂದು ಪ್ರಧಾನಿ ಕರೆ ಕೊಟ್ಟರೇ ಹೊರತು, ಪಂಪ್ ಬಂದ್ ಮಾಡಿ ಎಂದು ಅಲ್ಲ: ಧರ್ಮೇಂದ್ರ ಪ್ರಧಾನ್

ಮುಂದಿನ ತಿಂಗಳ 14ರಿಂದ ಪ್ರತಿ ಭಾನುವಾರ ಪೆಟ್ರೋಲ್‌ ಬಂಕ್ ಗಳನ್ನು ಮುಚ್ಚುವ ದಕ್ಷಿಣ ಭಾರತ ರಾಜ್ಯಗಳ ಪೆಟ್ರೋಲ್‌ ಬಂಕ್‌ ಮಾಲೀಕರ ಸಲಹೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ಇದರಿಂದ...

ನವದೆಹಲಿ: ಮುಂದಿನ ತಿಂಗಳ 14ರಿಂದ ಪ್ರತಿ ಭಾನುವಾರ ಪೆಟ್ರೋಲ್‌ ಬಂಕ್ ಗಳನ್ನು ಮುಚ್ಚುವ ದಕ್ಷಿಣ ಭಾರತ ರಾಜ್ಯಗಳ ಪೆಟ್ರೋಲ್‌ ಬಂಕ್‌ ಮಾಲೀಕರ ಸಲಹೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ಇದರಿಂದ  ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ತೈಲ ಸಚಿವಾಲಯ ಶುಕ್ರವಾರ ಅಭಿಪ್ರಾಯಪಟ್ಟಿದೆ.

ವಾರದಲ್ಲಿ ಒಂದು ದಿನ ಪೆಟ್ರೋಲ್ ಬಂಕ್ ಬಂದ್ ಮಾಡುವ ದಕ್ಷಿಣ ಭಾರತ ರಾಜ್ಯಗಳ ಪೆಟ್ರೋಲ್‌ ಬಂಕ್‌ ಮಾಲೀಕರ ಒಕ್ಕೂಟದ ಸಲಹೆಯನ್ನು ತಿರಸ್ಕರಿಸಿರುವ ಕೇಂದ್ರ ಸರ್ಕಾರ, ಬಂಕ್ ಬಂದ್ ಮಾಡುವುದರಿಂದ  ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ಹೇಳಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು, "ವಾರದಲ್ಲಿ ಒಂದು ದಿನ ಪೆಟ್ರೋಲ್‌, ಡೀಸೆಲ್‌ ಅನ್ನು ಬಳಕೆ ಮಾಡುವುದನ್ನು  ಕಡಿಮೆ ಮಾಡುವ ಮೂಲಕ ದೇಶ ಕಚ್ಚಾ ತೈಲದ ಆಮದನ್ನು ತಗ್ಗಿಸಬಹುದು. ಈ ಮೂಲಕ ದೇಶಕ್ಕೆ ಇಂಧನವನ್ನು ಉಳಿತಾಯ ಮಾಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ "ಮನ್‌ ಕಿ ಬಾತ್‌"ನಲ್ಲಿ ಹೇಳಿದ್ದಾರೆಯೇ ಹೊರತು,  ವಾರದಲ್ಲಿ ಒಂದು ದಿನ ಪೆಟ್ರೋಲ್‌ ಬಂಕ್‌ ಗಳನ್ನು ಮುಚ್ಚಲು ಅಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಈ ಕುರಿತಂತೆ ಸರಣಿ ಟ್ವೀಟ್‌ ಮಾಡಿರುವ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು, "ಅಲ್ಪ ಸಂಖ್ಯೆಯ ಪಂಪ್‌ ಗಳ ಈ ನಿರ್ಧಾರದಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ಹೀಗಾಗಿ ಒಕ್ಕೂಟದ  ಈ ಬೇಡಿಕೆಗೆ ಸಮ್ಮತಿಸುವ ಪ್ರಮೇಯವೇ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದೆಡೆ ದೇಶದಲ್ಲಿ ಶೇ.80ರಷ್ಟು (53,224) ಪೆಟ್ರೋಲ್‌ ಬಂಕ್ ಗಳನ್ನು ಹೊಂದಿರುವ ಇಂಡಿಯನ್‌ ಪೆಟ್ರೋಲಿಯಂ ಡೀಲರ್ ಅಸೋಸಿಯೇಷನ್‌, ಪಂಪ್‌ ಮುಚ್ಚುವ ಪ್ರಕ್ರಿಯೆಯಲ್ಲಿ ತಾನಿಲ್ಲ ಎಂದಿದೆ. ತಮಿಳುನಾಡು,  ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಪುದುಚೇರಿ, ಕರ್ನಾಟಕ, ಮಹಾರಾಷ್ಟ್ಯ ರಾಜ್ಯಗಳಲ್ಲಿ ಮೇ 14ರಿಂದ ಭಾನುವಾರಗಳಂದು ಪೆಟ್ರೋಲ್‌ ಬಂಕ್ ಗಳಿಗೆ ರಜೆ ನೀಡಲು ಅನುಮತಿ ನೀಡುವಂತೆ ಭಾರತದ ಪೆಟ್ರೋಲಿಯಂ ಡೀಲರ್‌ಗಳ ಒಕ್ಕೂಟ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಒಕ್ಕೂಟದ ನಿರ್ಧಾರಕ್ಕೆ ಕರ್ನಾಟಕದ ಡೀಲರ್‌ ಗಳು ಅಸಮ್ಮತಿ ಸೂಚಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT