ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾಶ್ಮೀರ: ಜಾನುವಾರು ಸಾಕಾಣೆ ಅಲೆಮಾರಿ ಕುಟುಂಬದ ಮೇಲೆ ದಾಳಿ; ನಾಲ್ವರು ಗೋರಕ್ಷಕರ ವಿರುದ್ಧ ಪ್ರಕರಣ

ಜಾನುವಾರುಗಳನ್ನು ಸಾಕುವ ಅಲೆಮಾರಿ ಕುಟುಂಬದ ಮೇಲೆ ದಾಳಿ ಮಾಡಿದ ನಾಲ್ಕು ಸದಸ್ಯರ ಸ್ವಯಂಘೋಷಿತ ಗೋರಕ್ಷಕರ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ರೆಸಾಯಿ ಜಿಲ್ಲೆಯಲ್ಲಿ ಪೊಲೀಸರು ಶನಿವಾರ

ಜಮ್ಮು: ಜಾನುವಾರುಗಳನ್ನು ಸಾಕುವ ಅಲೆಮಾರಿ ಕುಟುಂಬದ ಮೇಲೆ ದಾಳಿ ಮಾಡಿದ ನಾಲ್ಕು ಸದಸ್ಯರ ಸ್ವಯಂಘೋಷಿತ ಗೋರಕ್ಷಕರ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ರೆಸಾಯಿ ಜಿಲ್ಲೆಯಲ್ಲಿ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. 
ಒಂಭತ್ತು ವರ್ಷದ ಬಾಲಕಿಯನ್ನು ಸೇರಿದಂತೆ, ಗುರುವಾರ ರಾತ್ರಿ ನಡೆದ ಈ ದಾಳಿಯಲ್ಲಿ ಕುಟುಂಬದ ಐವರು ಸದಸ್ಯರಿಗೂ ಗಾಯಗಳಾಗಿವೆ. ಜಾನುವಾರುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವರ್ಗಾಯಿಸುವಾಗ ತಲ್ವಾರ ಪ್ರದೇಶದಲ್ಲಿ ಈ ದಾಳಿ ನಡೆದಿದೆ. 
"ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ. ಏಪ್ರಿಲ್ ೨೦ರ ರಾತ್ರಿ, ದನಕರು, ಮೇಕೆ ಮತ್ತು ಕುರಿಗಳನ್ನು ಒಳಗೊಂಡಂತೆ ಜಾನುವಾರುಗಳನ್ನು ಸ್ಥಳಾಂತರಿಸುವಾಗ ಅಲೆಮಾರಿ ಕುಟುಂಬದ ಮೇಲೆ ದಾಳಿ ಮಾಡಿದ ಈ ವ್ಯಕ್ತಿಗಳನ್ನು ಬಂಧಿಸಿದ್ದೇವೆ" ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. 
ಎಲ್ಲ ಜಾನುವಾರುಗಳನ್ನು ಮಾಲೀಕರಿಗೆ ನೀಡಲಾಗಿದೆ ಎಂದು ಕೂಡ ಪೋಲಿ ಅಧಿಕಾರಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT