ಸುಪ್ರೀಂ ಕೋರ್ಟ್ 
ಪ್ರಧಾನ ಸುದ್ದಿ

ಕೇರಳ ಪೊಲೀಸ್ ಮಹಾ ನಿರ್ದೇಶಕ ಸೇನ್‌ ಕುಮಾರ್‌ ಮರು ನೇಮಕಕ್ಕೆ ಸುಪ್ರೀಂ ಆದೇಶ

ಕೇರಳ ಪೊಲೀಸ್ ಮಹಾ ನಿರ್ದೇಶಕ ಹುದ್ದೆಯಿಂದ ವಜಾಗೊಂಡಿದ್ದ ಟಿ ಪಿ ಸೇನ್‌ ಕುಮಾರ್‌ ಅವರನ್ನು ಹುದ್ದೆಯಲ್ಲಿ ಮರು...

ನವದೆಹಲಿ: ಕೇರಳ ಪೊಲೀಸ್ ಮಹಾ ನಿರ್ದೇಶಕ ಹುದ್ದೆಯಿಂದ ವಜಾಗೊಂಡಿದ್ದ ಟಿ ಪಿ ಸೇನ್‌ ಕುಮಾರ್‌ ಅವರನ್ನು ಹುದ್ದೆಯಲ್ಲಿ ಮರು ಸ್ಥಾಪಿಸುವಂತೆ ಸೋಮವಾರ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. 
ತಕ್ಷಣದಿಂದ ಜಾರಿಗೆ ಬರುವಂತೆ ಸೇನ್ ಕುಮಾರ್ ಅವರನ್ನು ಪೊಲೀಸ್ ಮಹಾ ನಿರ್ದೇಶ ಹುದ್ದೆಗೆ ನೇಮಕ ಮಾಡುವಂತೆ ನ್ಯಾ.ಮದನ್‌ ಬಿ ಲೋಕೂರ್‌ ಮತ್ತು ದೀಪಕ್‌ ಗುಪ್ತಾ ಅವರನ್ನು ಒಳಗೊಂಡ ಪೀಠ ಆದೇಶ ನೀಡಿದ್ದು, ಇದರಿಂದಾಗಿ ಪ್ರಸ್ತೂತ ಪೊಲೀಸ್ ಮಹಾ ನಿರ್ದೇಶಕ ಲೋಕನಾಥ್ ಬೆಹೆರಾ ಅವರ ಸ್ಥಾನ ಕುತ್ತು ಬಂದಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸೇನ್ ಕುಮಾರ್ ಅವರನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಸೇನ್ ಕುಮಾರ್ ಅವರು, ಪೊಲೀಸ್ ಮಹಾ ನಿರ್ದೇಶಕರ ಹುದ್ದೆಯ ಅವಧಿ ಕನಿಷ್ಠ ಎರಡು ವರ್ಷವಾಗಿದ್ದು, ತಮ್ಮನ್ನು ಒಂದು ವರ್ಷಕ್ಕೆ ತೆಗೆದು ಹಾಕುವ ಮೂಲಕ ಕೇರಳ ಪೊಲೀಸ್ ಕಾಯ್ಕೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ ಎಂದು ವಾದಿಸಿದ್ದರು.
ಸೇನ್ ಕುಮಾರ್ ವಾದವನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್‌, ಕೇರಳದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಸೇನ್‌ ಕುಮಾರ್‌ ಅವರನ್ನು ಅನುಚಿತವಾಗಿ ನಡೆಸಿಕೊಂಡಿದೆ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಈ ಹಿಂದೆ ಪ್ರಕಾಶ್‌ ಸಿಂಗ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅತ್ಯಂತ ಸ್ಪಷ್ಟ ಮಾತುಗಳಲ್ಲಿ ಕೇರಳ ಸರ್ಕಾರಕ್ಕೆ ಪೊಲೀಸ್ ಮಹಾ ನಿರ್ದೇಶಕ ಹುದ್ದೆಯ ಕಾರ್ಯಾವಧಿಯು ಕನಿಷ್ಠ ಎರಡು ವರ್ಷಕ್ಕೆ ಖಚಿತವಾಗಿರಬೇಕು ಮತ್ತು ಅವರನ್ನು ರಾಜ್ಯದಲ್ಲಿನ ಅಧಿಕಾರಸ್ಥರು ತಮ್ಮ ಇಷ್ಟಾನುಸಾರ ಅವರನ್ನು ಬೇಕೆಂದಾಗ ಬೇಕೆಂದಲ್ಲಿಗೆ ಎತ್ತಂಗಡಿ ಮಾಡಬಾರದು ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ