ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಪಾಕ್ ಪ್ರಧಾನಿ ನವಾಜ್ ಷರೀಫ್, ಸಜ್ಜನ್ ಜಿಂದಾಲ್ ರಹಸ್ಯ ಮಾತುಕತೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ ಉಕ್ಕು ಕ್ಷೇತ್ರದ ಉದ್ಯಮಿ ಸಜ್ಜನ್ ಜಿಂದಾಲ್ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಿದ್ದು,...

ಇಸ್ಲಾಮಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ ಉಕ್ಕು ಕ್ಷೇತ್ರದ ಉದ್ಯಮಿ ಸಜ್ಜನ್ ಜಿಂದಾಲ್ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಿದ್ದು, ಸತತ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಕೇಂದ್ರ ಸರ್ಕಾರದ ಇಬ್ಬರು ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಉದ್ಯಮಿಸಜ್ಜನ್ ಜಿಂದಾಲ್ ಅವರು ಪಾಕಿಸ್ತಾನದ ಕಾಬೂಲ್ ಗೆ ವಿಶೇಷ ವಿಮಾನದಲ್ಲಿ ತೆರಳಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ರಾಜಧಾನಿ ಇಸ್ಲಾಮಾಬಾದ್ ಗೆ ತೆರಳಿದ್ದಾರೆ. ಇಸ್ಲಾಮಾಬಾದ್ ನ ನವಾಜ್ ಷರೀಫ್ ನಿವಾಸದಲ್ಲಿ ಸಜ್ಜನ್ ಜಿಂದಾಲ್ ಮಹತ್ವದ ಚರ್ಚೆ ನಡೆಸಿದ್ದು, ಚರ್ಚೆಯ ಅಂಶಗಳೇನೂ ಎಂಬುದು ತಿಳಿದುಬಂದಿಲ್ಲ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.

ಸಜ್ಜನ್ ಜಿಂದಾಲ್ ಅವರೊಂದಿಗೆ ಇರುವ ಮತ್ತಿಬ್ಬರು ಸದಸ್ಯರನ್ನು ಸುಖೇತ್ ಸಿಂಗ್ ಮತ್ತು ವಿರೇಂದರ್ ಬಾಬರ್ ಸಿಂಗ್ ಎಂದು ಹೇಳಲಾಗಿದ್ದು, ಈ ಇಬ್ಬರು ಯಾರು ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ ಎಂದೂ ವರದಿಯಲ್ಲಿ  ತಿಳಿಸಲಾಗಿದೆ. ಅಂತೆಯೇ ಮಾಧ್ಯಮಗಳ ವರದಿಯಲ್ಲಿ ಈ ತಂಡ ಪ್ರಸ್ತುತ ಪಾಕಿಸ್ತಾನದ ವಶದಲ್ಲಿರುವ ಭಾರತದ ಮಾಜಿ ನೌಕಾದಳ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಬಿಡುಗಡೆಗಾಗಿಯೇ ಸಂಧಾನ ಮಾತುಕತೆ ನಡೆಸಲು ಬಂದಿದ್ದಾರೆ ಎಂದು ಮಾಧ್ಯಮಗಳು ಶಂಕಿಸಿವೆ. ಈ ಹಿಂದೆಯೂ ಕೂಡ ಸಜ್ಜನ್ ಜಿಂದಾಲ್ ನವಾಜ್ ಷರೀಫ್ ಅವರ ಮಗಳ ಮದುವೆಗೆ ಮುಖ್ಯ ಅತಿಥಿಯಾಗಿದ್ದರು. ಕಳೆದ ವರ್ಷ ಡಿಸೆಂಬರ್ 25ರಂದು ನವಾಜ್ ಷರೀಫ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ದಿಢೀರ್ ಭೇಟಿಗೂ ಸಜ್ಜನ್ ಜಿಂದಾಲ್ ಅವರೇ ಕಾರಣ ಎಂದೂ ಮಾಧ್ಯಮಗಳು ವರದಿಯಲ್ಲಿ ಹೇಳಿವೆ.

ಆದರೆ ಮಾಧ್ಯಮಗಳ ಊಹಾಪೋಹಗಳನ್ನು ನವಾಜ್ ಷರೀಫ್ ಕಚೇರಿ ತಳ್ಳಿಹಾಕಿದ್ದು, ನವಾಜ್ ಷರೀಫ್ ಅವರು ಸಜ್ಜನ್ ಜಿಂದಾಲ್ ಅವರೊಂದಿಗೆ ವಾಣಿಜ್ಯ ವ್ಯವಹಾರ ಹೊಂದಿದ್ದು, ಈ ಬಗ್ಗೆ ಚರ್ಚಿಸುವ ಸಲುವಾಗಿ ಅವರು ಭೇಟಿಯಾಗಿದ್ದರು. ಭೇಟಿಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಇದು ರಾಜತಾಂತ್ರಿಕ ಭೇಟಿಯಲ್ಲ, ಕೇವಲ ವಾಣಿಜ್ಯ ಉದ್ದೇಶದ ಭೇಟಿಯಾಗಿತ್ತು ಎಂದು ನವಾಜ್ ಷರೀಫ್ ಅವರ ವಕ್ತಾರರು ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಪ್ರಧಾನಿ ಸ್ಪಷ್ಟನೆ ಕೇಳಿದ ವಿಪಕ್ಷಗಳು
ಇನ್ನು ಸಜ್ಜನ್ ಜಿಂದಾಲ್ ಮತ್ತು ಪ್ರಧಾನಿ ನವಾಜ್ ಷರೀಫ್ ಅವರ ಭೇಟಿ ಕುರಿತಂತೆ ಶಂಕೆ ವ್ಯಕ್ತಪಡಿಸಿರುವ ವಿಪಕ್ಷಗಳು ಈ ಬಗ್ಗೆ ಕೂಡಲೇ ಪ್ರಧಾನಿ ನವಾಜ್ ಷರೀಫ್ ಅವರು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ನಾಯಕ ಇಮ್ರಾನ್ ಖಾನ್ ಅವರು ನವಾಜ್ ಷರೀಫ್ ಅವರ ನಡೆ ಶಂಕೆ ಮೂಡಿಸುವಂತಿದೆ. ಹೀಗಾಗಿ ಅವರು ಕೂಡಲೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT