ಅಪಘಾತಕ್ಕೊಳಗಾದ ಕಾರು 
ಪ್ರಧಾನ ಸುದ್ದಿ

ಜಯಾ ಎಸ್ಟೇಟ್‌ ಗಾರ್ಡ್‌ ಕೊಲೆ ಪ್ರಕರಣ: ಅಪಘಾತದಲ್ಲಿ ಶಂಕಿತ ಆರೋಪಿ ಸಾವು

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜೆ ಜಯಲಲಿತಾ ಅವರ ನೀಲಗಿರಿ ಜಿಲ್ಲೆಯ ಎಸ್ಟೇಟ್‌ ಸೆಕ್ಯುರಿಟಿ ಗಾರ್ಡ್‌ ಕೊಲೆ

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜೆ ಜಯಲಲಿತಾ ಅವರ ನೀಲಗಿರಿ ಜಿಲ್ಲೆಯ ಎಸ್ಟೇಟ್‌ ಸೆಕ್ಯುರಿಟಿ ಗಾರ್ಡ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಕಣಗರಾಜ್ ಅವರು ಶನಿವಾರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. 
ಇಂದು ನೆರೆಯ ರಾಜ್ಯ ಕೇರಳದ ತ್ರಿಸೂರ್ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಣಗರಾಜ್, ಆತನ ಪತ್ನಿ ವಿನುಪ್ರಿಯಾ ಹಾಗೂ ಪುತ್ರಿ ನೀತು ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಆರೋಪಿ ಹಾಗೂ ಕಣಗರಾಜ್ ಆಪ್ತ ಸಯನ್ ಅಲಿಯಾಸ್ ಶ್ಯಾಮ್ ಗಂಭೀರವಾಗಿ ಗಾಯಗೊಂಡಿದ್ದಾರೆ.
2012ರವರೆಗೆ ಜಯಲಲಿತಾ ಅವರ ಕಾರು ಚಾಲಕನಾಗಿದ್ದ ಕಣಗರಾಜ್, ಇತ್ತೀಚಿಗೆ ಜಯಲಲಿತಾ ಅವರ ಕೊಡನಾಡು ಟೀ ಎಸ್ಟೇಟ್  ಸೆಕ್ಯುರಿಟಿ ಗಾರ್ಡ್‌ ಓಂ ಬಹದ್ದೂರ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದೆ. 
ಜಯಲಲಿತಾ ಅವರ ಕೊಡನಾಡಿನಲ್ಲಿರುವ ಎಸ್ಟೇಟ್‌ 900 ಎಕರೆಯದ್ದಾಗಿದ್ದು ಇಲ್ಲಿನ ರಾಜವೈಭವದ ಅರಮನೆಯಂತಹ ಬೃಹತ್‌ ಬಂಗಲೆಯಲ್ಲಿ ಜಯಾ ಆಗೀಗ ಬಂದು ಇರುತ್ತಿದ್ದರು. ನಿಧನಕ್ಕೆ ಮುನ್ನ ಕೆಲವು ವರ್ಷಗಳ ಹಿಂದಿನಿಂದಲೇ ಜಯಾ ಈ ಬಂಗಲೆಯಲ್ಲಿ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT