ಮನೀಶ್ ಸಿಸೋಡಿಯಾ-ಅಣ್ಣ ಹಜಾರೆ 
ಪ್ರಧಾನ ಸುದ್ದಿ

ಅಣ್ಣ ಹಜಾರೆ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿಲ್ಲ; ನನ್ನ ಖಾತೆ ಹ್ಯಾಕ್ ಆಗಿತ್ತು: ಸಿಸೋಡಿಯಾ

ಮಾಜಿಕ ಕಾರ್ಯಕರ್ತ ಅಣ್ಣ ಹಜಾರೆ ಅವರನ್ನು "ಮೋಸಗಾರ" ಎಂದು ಕರೆದ ಟ್ವೀಟ್ ಗಳನ್ನು ನಾನು ಬೆಂಬಲಿಸಿಲ್ಲ ಮತ್ತು ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು ಎಂದು ದೆಹಲಿ ಉಪಮುಖ್ಯಮಂತ್ರಿ

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಅಣ್ಣ ಹಜಾರೆ ಅವರನ್ನು "ಮೋಸಗಾರ" ಎಂದು ಕರೆದ ಟ್ವೀಟ್ ಗಳನ್ನು ನಾನು ಬೆಂಬಲಿಸಿಲ್ಲ ಮತ್ತು ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. 
ಅಣ್ಣ ಹಜಾರೆ "ಭಾರತೀಯ ಜನತಾ ಪಕ್ಷದ ಏಜೆಂಟ್ ಮತ್ತು ಮೋಸಗಾರ" ಎಂದು ಬಣ್ಣಿಸಲಾದ ಟ್ವೀಟ್ ಗಳನ್ನು ಸಿಸೋಡಿಯಾ ಮರು ಟ್ವೀಟಿಸಿದ್ದರು ಎನ್ನಲಾಗಿತ್ತು. 
"ದಯವಿಟ್ಟು ಅವುಗಳನ್ನು (ಟ್ವೀಟ್ ಗಳನ್ನು) ನಂಬಬೇಡಿ. ಅಣ್ಣಾ ಅವರ ಮೇಲೆ ನನಗೆ ಅತೀವ ಗೌರವವಿದೆ. ಅವರ ವಿರುದ್ಧ ಎಂದಿಗೂ ಅಂತಹ ಮಾತುಗಳನ್ನು ಬಳಸಲಾರೆ" ಎಂದು ಸಿಸೋಡಿಯಾ ಹೇಳಿದ್ದಾರೆ. 
ಮತ್ತೊಂದು ಟ್ವೀಟ್ ನಲ್ಲಿ ಇದರ ಬಗ್ಗೆ ಸ್ಪಷ್ಟನೆ ನೀಡಿರುವ ಅವರು "ನನ್ನ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು. ಯಾರೋ ಅಣ್ಣ ಹಜಾರೆ ವಿರುದ್ಧವಾದ ಟ್ವೀಟ್ ಗಳನ್ನು ಮರು ಟ್ವೀಟ್ ಮಾಡಿದ್ದಾರೆ. ಅವುಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದ್ದೇನೆ. ಆದರೆ ಅವುಗಳು ಡಿಲೀಟ್ ಕೂಡ ಆಗುತ್ತಿಲ್ಲ" ಎಂದು ಬರೆದಿದ್ದಾರೆ. 
ಅರವಿಂದ್ ಕೇಜ್ರಿವಾಲ್ ಅಧಿಕಾರದ ಹಿಂದೆ ಬಿದ್ದಿರುವುದೇ ಆಮ್ ಆದ್ಮಿ ಪಕ್ಷದ ದೆಹಲಿ ಮುನ್ಸಿಪಲ್ ಚುನಾವಣೆಯ ದಯನೀಯ ಸೋಲಿಗೆ ಕಾರಣ ಎಂದು ಹಜಾರೆ ಟೀಕಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT