ಪೋಸ್ಟರ್ 
ಪ್ರಧಾನ ಸುದ್ದಿ

ಸುಕ್ಮಾ ದಾಳಿಕೋರರ ಸುಳಿವಿಗೆ 40 ಲಕ್ಷ ಬಹುಮಾನ ಘೋಷಣೆ!

25 ಮಂದಿ ಯೋಧರ ಸಾವಿಗೆ ಕಾರಣವಾದ ಸುಕ್ಮಾ ನಕ್ಸಲ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲರು ಸುಳಿವು ನೀಡಿದವರಿಗೆ 40 ಲಕ್ಷ ರು. ಬಹುಮಾನ ಘೋಷಣೆ ಮಾಡಲಾಗಿದೆ.

ಸುಕ್ಮಾ: 25 ಮಂದಿ ಯೋಧರ ಸಾವಿಗೆ ಕಾರಣವಾದ ಸುಕ್ಮಾ ನಕ್ಸಲ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲರು ಸುಳಿವು ನೀಡಿದವರಿಗೆ 40 ಲಕ್ಷ ರು. ಬಹುಮಾನ ಘೋಷಣೆ ಮಾಡಲಾಗಿದೆ.

ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಸಿಆರ್ ಪಿಎಫ್ ನ 74ನೇ ಬೆಟಾಲಿಯನ್ ಯೋಧರ ಮೇಲೆ ದಾಳಿ ಮಾಡಿದ್ದ ಸುಮಾರು 300 ಮಂದಿ ನಕ್ಸಲರು ಬರೊಬ್ಬರಿ 25 ಮಂದಿ ಯೋಧರನ್ನು ಹತ್ಯೆಗೈದಿದ್ದರು. ಈ ಪ್ರಕರಣ ಇಡೀ ದೇಶದ ಆಕ್ರೋಶಕ್ಕೆ ಕಾರಣವಾಗಿತ್ತು.

ಇದೀಗ ನಕ್ಸಲರ ವಿರುದ್ಧ ಕಠಿಣ ನಿಲುವು ತಳೆದಿರುವ ಕೇಂದ್ರ ಸರ್ಕಾರ ನಕ್ಸಲರ ಶತಾಯಗತಾಯ ಅವರನ್ನು ಮಟ್ಟಹಾಕಲು ನಿರ್ಧರಿಸಿದೆ. ಇದೇ ಕಾರಣಕ್ಕೆ ನಕ್ಸಲರ ಕುರಿತು ಮಾಹಿತಿ ನೀಡಿದವರಿಗೆ 40 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

ಇದೇ ವೇಳೆ ಛತ್ತೀಸ್ ಘಡದಲ್ಲಿ ನಕ್ಸಲರ ದಾಳಿ ಮಟ್ಟಹಾಕುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಒಟ್ಟು 28 ಬೆಟಾಲಿಯನ್ ಸೇನಾ ತುಕಡಿಗಳನ್ನು ಛತ್ತೀಸ್ ಘಡದಲ್ಲಿ ನಿಯೋಜಿಸಲಾಗಿದ್ದು, ನಕ್ಸಲ್ ಚಟುವಟಿಕೆ ವ್ಯಾಪಕವಾಗಿರುವ ಬಸ್ತಾರ್ ನಲ್ಲಿಯೇ 10 ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ಪ್ರತೀ ಬೆಟಾಲಿಯನ್ ನಲ್ಲಿ 1 ಸಾವಿರ ಯೋಧರು ಇರಲಿದ್ದಾರೆ ಎಂದು ಸಿಆರ್ ಪಿಎಫ್ ಡಿಜಿ ಸುದೀಪ್ ಲಕ್ತಾಕಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT