ಮಾಜಿ ದೂರಸಂಪರ್ಕ ಖಾತೆ ಸಚಿವ ದಯಾನಿಧಿ ಮಾರನ್ 
ಪ್ರಧಾನ ಸುದ್ದಿ

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ದಯಾನಿಧಿ ಮಾರನ್ ಸೇರಿದಂತೆ ಎಲ್ಲ ಆರು ಆರೋಪಿಗಳ ಖುಲಾಸೆ

ಮಾಜಿ ದೂರಸಂಪರ್ಕ ಖಾತೆ ಸಚಿವ ದಯಾನಿಧಿ ಮಾರನ್ ಸೇರಿದಂತೆ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದ ಎಲ್ಲ ಆರೋಪಿಗಳನ್ನು ವಿಶೇಷ ನ್ಯಾಯಾಲಯ ಗುರುವಾರ ಆರೋಪಮುಕ್ತಗೊಳಿಸಿದೆ.

ನವದೆಹಲಿ: ಮಾಜಿ ದೂರಸಂಪರ್ಕ ಖಾತೆ ಸಚಿವ ದಯಾನಿಧಿ ಮಾರನ್ ಸೇರಿದಂತೆ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದ ಎಲ್ಲ ಆರೋಪಿಗಳನ್ನು ವಿಶೇಷ ನ್ಯಾಯಾಲಯ ಗುರುವಾರ ಆರೋಪಮುಕ್ತಗೊಳಿಸಿದೆ. 
ಯುಪಿಎ-೧ ಆಡಳಿತದ ಸಮಯದಲ್ಲಿ ಮಲೇಷಿಯಾ ಉದ್ದಿಮೆದಾರ ಟಿ ಎ ಆನಂದ ಕೃಷ್ಣನ್ ಅವರಿಗೆ ಏರ್ಸೆಲ್ ಕೊಳ್ಳಲು, ಅದರ ಮಾಜಿ ಒಡೆಯ ಶಿವಸಂಕರನ್ ಮೇಲೆ ಒತ್ತಡ ಹೇರಲು ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ಸಹಕರಿಸಿದ್ದರು ಎಂದು ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು. 
ಮಾರನ್ ಜೊತೆಗೆ ಅವರ ಸಹೋದರ-ಉದ್ಯಮಿ ಕಲಾನಿಧಿ ಮಾರನ್, ಚನ್ನೈ ಮೂಲದ ಸನ್ ಡೈರೆಕ್ಟ್ ಟಿವಿ, ಕೃಷ್ಣನ್, ಅವರ ಸಹಾಯಕ ಅಗಸ್ಟಸ್ ರಾಲ್ಫ್ ಮಾರ್ಷಲ್ ಮತ್ತು ಮಲೇಷಿಯಾ ಮೂಲದ ಎರಡು ಸಂಸ್ಥೆಗಳಾದ ಮ್ಯಾಕ್ಸಿಸ್ ಕಮ್ಯುನಿಕೇಷನ್ಸ್ ಬರ್ಹಾದ್ ಮತ್ತು ಆಸ್ಟ್ರೋ ಏಶಿಯಾ ನೆಟ್ವರ್ಕ್ ಗಳನ್ನು ಈ ಪ್ರಕರಣದ ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT