ಪನ್ನೀರ್ ಸೆಲ್ವಂ ಹಾಗೂ ಬೆಂಬಲಿಗರು 
ಪ್ರಧಾನ ಸುದ್ದಿ

ನಾನು ತಪ್ಪಿಸಿಕೊಂಡು ಬಂದೆ, ಎಐಎಡಿಎಂಕೆ ಶಾಸಕನಿಂದ ಪೊಲೀಸರಿಗೆ ದೂರು

ತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ನಾಟಕ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪಕ್ಷದ ಪ್ರಧಾನ....

ಚೆನ್ನೈ: ತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ನಾಟಕ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರಿಂದ ಹೈಜಾಕ್ ಆಗಿದ್ದ ಪಕ್ಷದ ಶಾಸಕರೊಬ್ಬರು ಶುಕ್ರವಾರ ತಪ್ಪಿಸಿಕೊಂಡು ಬಂದು ಚೆನ್ನೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಶ್ರೀವೈಕುಂದಂ ಶಾಸಕ ಎಸ್ ಪಿ ಶಣ್ಮುಗನಾಥನ್ ಅವರು, ತಾವು ಶಶಿಕಲಾ ಅವರ ಖಾಸಗಿ ಭದ್ರತಾ ಸಿಬ್ಬಂದಿಯಿಂದ ತಪ್ಪಿಸಿಕೊಂಡು ಬಂದಿದ್ದು, ಇತರೆ ಶಾಸಕರನ್ನು ಸಹ ಅಕ್ರಮ ಬಂಧನದಿಂದ ಮುಕ್ತಗೊಳಿಸಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಕಳೆದ ಬುಧವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಎಲ್ಲಾ ಶಾಸಕರು ಸೇರಿದ್ದೇವು. ಅಲ್ಲಿಂದ ಒಂದು ಜೊತೆ ಬಟ್ಟೆ ತೆಗೆದುಕೊಳ್ಳುವುದಕ್ಕಾಗಿ ಶಾಸಕರ ಭವನಕ್ಕೆ ಬಸ್ ನಲ್ಲಿ ಕರೆದೊಯ್ಯಲಾಯಿತು. ಬಳಿಕ ಹಿರಿಯ ನಾಯಕ, ಮಾಜಿ ಸಚಿವ ಎಡಪ್ಪಡಿ ಪಳನಿಸಾಮಿ ಅವರ ನಿವಾಸಕ್ಕೆ ಕರೆದೊಯ್ದು ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡು, ನಿಗೂಢ ಸ್ಥಳಕ್ಕೆ ಕರೆದೊಯ್ದರು ಎಂದು ಶಣ್ಮುಗನಾಥನ್ ಅವರು ಆರೋಪಿಸಿದ್ದಾರೆ.
ಶಶಿಕಲಾ ಸೂಚನೆಯಂತೆ ಶಾಸಕರನ್ನು ಅಕ್ರಮ ಬಂಧನದಲ್ಲಿರಿಸಿದ್ದು, ಅವರ ಖಾಸಗಿ ಭದ್ರತಾ ಸಿಬ್ಬಂದಿ ಯಾವ ಒಬ್ಬ ಶಾಸಕರಿಗೂ ಮುಕ್ತವಾಗಿ ಓಡಾಡಲು ಬಿಡುತ್ತಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!