ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಭಾರತದಲ್ಲಿ ರಹಸ್ಯ ಅಣ್ವಸ್ತ್ರ ನಗರವಿದೆ: ಪಾಕಿಸ್ತಾನ ಗಂಭೀರ ಆರೋಪ

ಅಣ್ವಸ್ತ್ರ ತಯಾರಿಕೆಯಲ್ಲಿ ಸ್ಪರ್ಧೆಗಳಿದಿರುವ ಭಾರತ ರಹಸ್ಯ ನಗರವೊಂದರಲ್ಲಿ ಭಾರಿ ಪ್ರಮಾಣದ ಅಣ್ವಸ್ತ್ರಗಳನ್ನು ತಯಾರಿಸುತ್ತಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.

ನವದೆಹಲಿ: ಅಣ್ವಸ್ತ್ರ ತಯಾರಿಕೆಯಲ್ಲಿ ಸ್ಪರ್ಧೆಗಳಿದಿರುವ ಭಾರತ ರಹಸ್ಯ ನಗರವೊಂದರಲ್ಲಿ ಭಾರಿ ಪ್ರಮಾಣದ ಅಣ್ವಸ್ತ್ರಗಳನ್ನು ತಯಾರಿಸುತ್ತಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.

ಪಾಕಿಸ್ತಾನದ ವಿದೇಶಾಂಗ ವಕ್ತಾರ ನಫೀಸ್ ಝಕಾರಿಯಾ ಅವರು ಇಂತಹ ಗಂಭೀರ ಆರೋಪ ಮಾಡಿದ್ದು, ದಕ್ಷಿಣ ಭಾರತದ ರಹಸ್ಯ ನಗರದಲ್ಲಿ ಭಾರತದ ದೊಡ್ಡ ಅಣ್ವಸ್ತ್ರ ತಯಾರಿಕಾ ಕೇಂದ್ರವಿದ್ದು, ಇಲ್ಲಿ ಅತ್ಯಾಧುನಿಕ  ಅಣ್ವಸ್ತ್ರಗಳು, ಥರ್ಮೋ ನ್ಯೂಕ್ಲಿಯರ್ ಶಸ್ತ್ರಾಸ್ತ್ರಗಳು (ವೇಗೋತ್ಕರ್ಷದ ಶಸ್ತ್ರಾಸ್ತ್ರಗಳು), ಖಂಡಾಂತರ ಕ್ಷಿಪಣಿಗಳು ಮತ್ತು ಅಣ್ವಸ್ತ್ರ ಸಿಡಿತಲೆಗಳ ಬಿಡಿಭಾಗಗಳನ್ನು ಸಂಗ್ರಹಿಸಿಟ್ಟುಕೊಂಡಿದೆ ಎಂದು ಹೇಳಿದ್ದಾರೆ. ಅಂತೆಯೇ ಭಾರತದ  ಈ ಪ್ರಕ್ರಿಯೆಯಿಂದಾಗಿ ಈ ಭಾಗದ ವ್ಯೂಹಾತ್ಮಕ ಸಮತೋಲನದಲ್ಲಿ ಏರುಪೇರಾಗುತ್ತಿದೆ' ಎಂದು ಆರೋಪಿಸಿದ್ದಾರೆ.

ಆದರೆ ನಫೀಸ್ ಝಕಾರಿಯಾ ಅವರು ಭಾರತದ ಅಣ್ವಸ್ತ್ರ ನಗರ ಯಾವ ರಾಜ್ಯದಲ್ಲಿದೆ ಎಂದು ಹೇಳಿಲ್ಲ. ಆದರೆ, ಆ್ಯಡ್ರಿಯನ್‌ ಲೆವಿ ಎಂಬ ಲೇಖಕರು ಪಾಕಿಸ್ತಾನದ ಪರಮಾಣು ಕಾರ್ಯಕ್ರಮದ ಬಗ್ಗೆ ಪುಸ್ತಕವೊಂದನ್ನು ಬರೆದು,  ‘ಕರ್ನಾಟಕದ ಚಳ್ಳಕೆರೆ ಬಳಿ ಭಾರತ ‘ರಹಸ್ಯ ಅಣು ನಗರಿ' ನಿರ್ಮಿಸುತ್ತಿದೆ ಎಂದು ಬರೆದಿದ್ದರು. ಇದರ ಹಿನ್ನಲೆಯಲ್ಲೇ ಝಕಾರಿಯಾ ಅವರು ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

"ಕಪೋಲ ಕಲ್ಪಿತ ಹೇಳಿಕೆ ನೀಡುವುದನ್ನು ಪಾಕಿಸ್ತಾನ ಬಿಡಬೇಕು": ಭಾರತದಿಂದ ದಿಟ್ಟ ಉತ್ತರ
ಇನ್ನು ಪಾಕಿಸ್ತಾನದ ಈ ಗಂಭೀರ ಆರೋಪಕ್ಕೆ ದಿಟ್ಟ ಉತ್ತರ ನೀಡಿರುವ ಭಾರತ, ಪಾಕಿಸ್ತಾನ ತನ್ನ ಕಪೋಲದ ಕಲ್ಪಿತ ಹೇಳಿಕೆಗಳನ್ನು ನೀಡುವುದನ್ನು ಬಿಡಬೇಕು ಎಂದು ಕಟುವಾಗಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ  ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಅವರು, ಪಾಕಿಸ್ತಾನದ ಹೇಳಿಕೆ ಕೇವಲ ಕಲ್ಪನೆಯಾಗಿದ್ದು, ಇಂತಹ ಕಲ್ಪಿತ ಹೇಳಿಕೆಗಳನ್ನು ನೀಡುವುದನ್ನು ಪಾಕಿಸ್ತಾನ ಬಿಡಬೇಕು ಎಂದು ಹೇಳಿದ್ದಾರೆ.

ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿರುವಂತೆ ಭಾರತ ವಿಶ್ವ ಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯ ಸ್ಥಾನ ಮತ್ತು ಎನ್ ಎಸ್ ಜಿ ಸದಸ್ಯ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದು, ಈ ಹೊತ್ತಿನಲ್ಲಿ ಇಂತಹ ಆರೋಪಗಳು ಅದಕ್ಕೆ  ಮಾರಕವಾಗಬಹುದು ಎಂದ ಕಾರಣದಿಂದಲೇ ಪಾಕಿಸ್ತಾನ ಇಂತಹ ಹೇಳಿಕೆಗಳನ್ನು ನೀಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT