ರಾಹುಲ್ ಗಾಂಧಿ-ಅಖಿಲೇಶ್ ಯಾದವ್ 
ಪ್ರಧಾನ ಸುದ್ದಿ

ರಾಹುಲ್-ಅಖಿಲೇಶ್ ವಾರಣಾಸಿ ರೋಡ್ ಶೋ ರದ್ದು

ಉತ್ತರಪ್ರದೇಶದ ವಾರಣಾಸಿಯಲ್ಲಿ ಶುಕ್ರವಾರ ಜರುಗಬೇಕಿದ್ದ ಬಹುನಿರೀಕ್ಷಿತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜಂಟಿ ರೋಡ್ ಶೋ ರದ್ದಾಗಿದೆ.

ಲಖನೌ: ಉತ್ತರಪ್ರದೇಶದ ವಾರಣಾಸಿಯಲ್ಲಿ ಶುಕ್ರವಾರ ಜರುಗಬೇಕಿದ್ದ ಬಹುನಿರೀಕ್ಷಿತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜಂಟಿ ರೋಡ್ ಶೋ ರದ್ದಾಗಿದೆ. ದೀನರ ಸಂತ ಗುರು ರವಿದಾಸ್ ಅವರ ಜನ್ಮದಿನದ ಪ್ರಯುಕ್ತ ಈ ಕಾರ್ಯಕ್ರಮ ಬದಲಾಗಿದೆ. ವಿಧಾನಸಭಾ ಚುನಾವಣೆಗೆ ವಾರಣಾಸಿಯಲ್ಲಿ ಇಂದು ಈ ಇಬ್ಬರೂ ನಾಯಕರು ಒಟ್ಟಿಗೆ ಪ್ರಚಾರ ನಡೆಸಬೇಕಿತ್ತು. 
ಗುರುವಾರ ರಾತ್ರಿ ದೂರವಾಣಿ ಕರೆ ಮೂಲಕ ರಾಹುಲ್ ಗಾಂಧಿ ಅವರ ನವದೆಹಲಿ ಕಚೇರಿಯಿಂದ ಜಿಲ್ಲಾ ಕಾಂಗ್ರೆಸ್ ಮುಖಂಡರಿಗೆ ಈ ವಿಷಯವನ್ನು ತಿಲಿಸಲಾಗಿದೆ. 
ಈಗ ಈ ರೋಡ ಶೋಗಾಗಿ ಹೊಸ ದಿನಾಂಕವನ್ನು ನಿಗದಿಪಡಿಸಲು ಚರ್ಚಿಸಲಾಗುತ್ತಿದೆ. 
ಚುನಾವಣೆಗೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡ ನಂತರ ಈ ಎರಡೂ ನಾಯಕರು ಲಖನೌ, ಕಾನ್ಪುರ ಮತ್ತು ಆಗ್ರಾಗಳಲ್ಲಿ ಭಾರಿ ರೋಡ್ ಶೋ ನಡೆಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT