ತಮಿಳುನಾಡು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ 
ಪ್ರಧಾನ ಸುದ್ದಿ

ಪನ್ನೀರ್ ಸೆಲ್ವಂ ಬಣ ಸೇರಿದ ಇಬ್ಬರು ಎಐಡಿಎಂಕೆ ಸಂಸದರು

ತಮಿಳುನಾಡು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಬಣ ಸೇರುವ ಮೂಲಕ ಇಬ್ಬರು ಎಐಡಿಎಂಕೆ ಲೋಕಸಭಾ ಸದಸ್ಯರು ಶನಿವಾರ ತಮ್ಮ ಬೆಂಬಲ ಸೂಚಿಸಿದ್ದಾರೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಬಣ ಸೇರುವ ಮೂಲಕ ಇಬ್ಬರು ಎಐಡಿಎಂಕೆ ಲೋಕಸಭಾ ಸದಸ್ಯರು ಶನಿವಾರ ತಮ್ಮ ಬೆಂಬಲ ಸೂಚಿಸಿದ್ದಾರೆ.
ಕೃಷ್ಣಗಿರಿ ಕ್ಷೇತ್ರದ ಅಶೋಕ್ ಕುಮಾರ್ ಮತ್ತು ನಾಮಕ್ಕಲ್ ಪ್ರತಿನಿಧಿಸುವ ಸುಂದರಂ, ಪನ್ನೀರ್ ಸೆಲ್ವಂ ಗೃಹಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದ್ದಾರೆ. 
ಇದಕ್ಕೂ ಮುಂಚೆ ರಾಜ್ಯಸಭಾ ಸದಸ್ಯ ವಿ ಮೈತ್ರೇಯನ್ ಪನ್ನೀರ್ ಸೆಲ್ವಂ ಬಣ ಸೇರಿದ್ದರು. 
ವರದಿಗಾರರೊಂದಿಗೆ ಮಾತನಾಡಿದ ಅಶೋಕ್ ಕುಮಾರ್ ಇನ್ನಿತರ ಎಐಡಿಎಂಕೆ ಸಂಸದರು ಕೂಡ ಪನ್ನೀರ್ ಸೆಲ್ವಂ ಕೈಜೋಡಿಸಲಿದ್ದಾರೆ ಎಂದಿದ್ದಾರೆ. 
ಲೋಕಸಭೆಯಲ್ಲಿ ಎಐಡಿಎಂಕೆಯ ೩೭ ಸದಸ್ಯರಿದ್ದಾರೆ. 
ಮಂಗಳವಾರ ರಾತ್ರಿ ಐಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಅಲಂಕರಿಸಲು ಪ್ರಯತ್ನಿಸುತ್ತಿರುವ ವಿ ಕೆ ಶಶಿಕಲಾ ವಿರುದ್ಧ ತಿರುಗಿ ಬಿದ್ದಿದ್ದ ಪನ್ನೀರ್ ಸೆಲ್ವಂ, ತಮ್ಮ ಮೇಲೆ ಒತ್ತಡ ಹಾಕಿ ರಾಜೀನಾಮೆ ಪಡೆಯಲಾಗಿತ್ತು ಎಂದು ದೂರಿದ್ದರು. ಹಾಗು ರಾಜೀನಾಮೆ ಹಿಂಪಡೆಯುವ ಇಂಗಿತ ವ್ಯಕ್ತಪಡಿಸಿದ್ದರು.
ತದನಂತರ ಐವರು ಶಾಸಕರು, ಒಬ್ಬ ಸಂಸದ, ಪಕ್ಷದ ಹಿರಿಯ ರಾಜಕಾರಣಿಗಳು, ಮಾಜಿ ಶಾಸಕರು ಮತ್ತಿತರು ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ಸೂಚಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?