ಎಐಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ 
ಪ್ರಧಾನ ಸುದ್ದಿ

ಸದ್ಯಕ್ಕೆ ತಾಳ್ಮೆಯಿಂದ ಕಾದು, ನಂತರ ಅಗತ್ಯ ಹೆಜ್ಜೆ ಇರಿಸುತ್ತೇವೆ: ಶಶಿಕಲಾ

ಮುಖ್ಯಮಂತ್ರಿ ಹುದ್ದೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಒ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ಹೆಚ್ಚುತ್ತಿರುವಂತೆ, ಆ ಸ್ಥಾನದ ಆಕಾಂಕ್ಷಿ ಮತ್ತು ಎಐಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ

ಚೆನ್ನೈ: ಮುಖ್ಯಮಂತ್ರಿ ಹುದ್ದೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಒ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ಹೆಚ್ಚುತ್ತಿರುವಂತೆ, ಆ ಸ್ಥಾನದ ಆಕಾಂಕ್ಷಿ ಮತ್ತು ಎಐಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್ ಭೇಟಿಗೆ ಶನಿವಾರ ಸಮಯಾವಕಾಶ ಕೋರಿದ್ದಾರೆ. ಇನ್ನು ಸ್ವಲ್ಪ ಕಾಲದವರೆಗೆ ಶಾಂತಿಯಿಂದ ಕಾಯಲಿದ್ದು "ನಂತರ ಅಗತ್ಯ ಹೆಜ್ಜೆ ಇರಿಸುತ್ತೇವೆ" ಎಂದಿದ್ದಾರೆ ಶಶಿಕಲಾ. 
ಜಯ ಟಿವಿ ವಾಹಿನಿಯಲ್ಲಿ ಮಾತನಾಡಿದ ಶಶಿಕಲಾ ತಮಗೆ ಪ್ರಜಾಪ್ರಭುತ್ವ, ನ್ಯಾಯ ಮತ್ತು ಶಾಂತಿಯನ್ನು ಕಾಪಾಡುವುದರಲ್ಲಿ ನಂಬಿಕೆಯಿದೆ ಎಂದಿದ್ದಾರೆ.
"ಒಂದು ಸಮಯದವರೆಗೆ ನಾವು ಶಾಂತಿಯಿಂದ ಇರಬಹುದು. ಅನಂತರ ಏನು ಅಗತ್ಯವೋ ಅದನ್ನು ಮಾಡಬೇಕಾಗುತ್ತದೆ" ಎಂದು ಅವರು ಹೇಳಿದ್ದಾರೆ. 
ಎಐಡಿಎಂಕೆ ಪಕ್ಷ ಕಬ್ಬಿಣದ ಕೋಟೆಯಿದ್ದಂತೆ ಎಂದಿರುವ ಅವರು ಅದನ್ನು ಅಲುಗಾಡಿಸಲು ಯಾರಿಗೂ ಸಾಧ್ಯವಿಲ್ಲ. ಪಕ್ಷದ ಕಾರ್ಯಕರ್ತರ ಸಂಖ್ಯೆ ೧.೫ ಕೋಟಿಗೂ ಹೆಚ್ಚಿದ್ದು, ಪಕ್ಷವನ್ನು ಒಡೆಯಲು ಬಯಸುವವವರಿಗೆ ಗೆಲುವು ಅಸಾಧ್ಯ ಎಂದು ಕೂಡ ಹೇಳಿದ್ದಾರೆ. 
ನನಗೆ ಯಾವುದಕ್ಕೂ ಭಯಪಡುವ ಅಗತ್ಯ ಇಲ್ಲ ಎಂದು ಕೂಡ ಅವರು ಹೇಳಿದ್ದಾರೆ. 
ಇದಕ್ಕೂ ಮುಂಚಿತವಾಗಿ ತಮ್ಮ ಬೆಂಬಲಿತ ಶಾಸಕರೊಂದಿಗೆ ಭೇಟಿ ಮಾಡಲು ಸಮಯ ನೀಡುವಂತೆ ಕೋರಿ ರಾಜ್ಯಪಾಲ ರಾವ್ ಅವರಿಗೆ ಪತ್ರ ಬರೆದಿದ್ದರು. 
"...ಈಗ ಸೃಷ್ಟಿಯಾಗಿರುವ ಬಿಕ್ಕಟ್ಟಿನ ದೃಷ್ಟಿಯಿಂದ, ಇಂದು ಎಲ್ಲ ಬೆಂಬಲಿತ ಶಾಸಕರ (ವಿಧಾನ ಸಭಾ ಸದಸ್ಯರು) ಜೊತೆಗೆ ನಿಮ್ಮನ್ನು ಭೇಟಿ ಮಾಡಲು ಅವಕಾಶ ಕೊಡಿ. ಈ ಎಲ್ಲ ಶಾಸಕರು ಸರ್ಕಾರ ರಚಿಸಲು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ನನಗೆ ಬೆಂಬಲಿಸಿದ್ದಾರೆ.
"ಸಂವಿಧಾನದ, ಪ್ರಜಾಪ್ರಭುತ್ವದ ಮತ್ತು ರಾಜ್ಯ ಹಿತಾಸಕ್ತಿಯ ಸಾರ್ವಭೌಮತ್ವವನ್ನು ಕಾಪಾಡಲು ಗೌರವಾನ್ವಿತ ರಾಜ್ಯಪಾಲರು ಕೂಡಲೇ ಮುಂದಾಗುತ್ತಾರೆ ಎಂದು ನಂಬಿದ್ದೇನೆ" ಎಂದು ಕೂಡ ಪತ್ರದಲ್ಲಿ ಶಶಿಕಲಾ ಬರೆದಿದ್ದರು. 
ಸರ್ಕಾರ ರಚಿಸಲು ತಮಗೆ ಶಾಸಕರು ಬೆಂಬಲ ಸೂಚಿಸಿ ಸಹಿ ಹಾಕಿರುವ ಪತ್ರವನ್ನು ಶಶಿಕಲಾ ಈಗಾಗಲೇ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಈ ಮಧ್ಯೆ ಒ ಪನ್ನೀರ್ ಸೆಲ್ವಂ ಅವರನ್ನು ಬೆಂಬಲಿಸಲು ಕೆಲವು ಮಂದಿ ಶಾಸಕರು, ಸಚಿವರು, ಸಂಸದರು ಮತ್ತು ಪಕ್ಷದ ಮುಖಂಡರು ಮುಂದೆ ಬಂದಿರುವುದು ವಿವಾದ ತಾರಕಕ್ಕೇರುವ ಸಂಭವವಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT