ಶಶಿಕಲಾ 
ಪ್ರಧಾನ ಸುದ್ದಿ

ಪರಪ್ಪನ ಅಗ್ರಹಾರ ಜೈಲು ಸೇರಿದ ಜಯಾ ಆಪ್ತೆ ಶಶಿಕಲಾ, ಮನೆ ಊಟಕ್ಕೆ ಕೋರ್ಟ್ ನಕಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ...

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರು ಬುಧವಾರ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹ ಸೇರಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಅಪರಾಧಿಗಳಾದ ವಿ.ಕೆ.ಶಶಿಕಲಾ, ಶಶಿಕಲಾ ಅಣ್ಣನ ಪತ್ನಿ ಇ.ಇಳವರಸಿ ಹಾಗೂ ಜಯಾ ದತ್ತು ಪುತ್ರ ಸುಧಾಕರನ್ ಅವರು ಇಂದು ಸಂಜೆ ಪರಪ್ಪನ ಅಗ್ರಹಾರದಲ್ಲಿರುವ ವಿಶೇಷ ನ್ಯಾಯಾಲಯಕ್ಕೆ   ಶರಣಾದರು. 
ಅಪರಾಧಿಗಳನ್ನು ವಿಚಾರಣೆ ನಡೆಸಿದ ನ್ಯಾ. ಅಶ್ವತ್ಥ ನಾರಾಯಣ ಅವರು, ಮೂವರು ಅಪರಾಧಿಗಳನ್ನು ವಶಕ್ಕೆ ಪಡೆದು ಸಾಮಾನ್ಯ ಕೈದಿಗಳಂತೆ ನೋಡಿಕೊಳ್ಳಿ ಹಾಗೂ ಅವರ ವೈದ್ಯಕೀಯ ತಪಾಸಣೆಯ ನಂತರ ವರದಿ ನೀಡುವಂತೆ ಜೈಲು ಅಧಿಕಾರಿಗಳು ಸೂಚಿಸಿದರು. 
ಈ ವೇಳೆ ಮನೆ ಊಟಕ್ಕೆ ಅವಕಾಶ ನೀಡಬೇಕು ಎಂದು ಶಶಿಕಲಾ ಅವರು ಕೋರ್ಟ್ ಗೆ ಮನವಿ ಮಾಡಿದರು. ಆದರೆ ಅವರ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.
ನ್ಯಾಯಾಲಯದ ಪ್ರಕ್ರಿಯೆ ಪೂರ್ಣಗೊಂಡ ನಂತರ ಮೂವರು ಅಪರಾಧಿಗಳನ್ನು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.
ಈ ಮಧ್ಯೆ ಶಶಿಕಲಾ ಅವರು ಕೇಂದ್ರ ಕಾರಾಗೃಹದ ಸಮೀಪ ಬರುತ್ತಿದ್ದ ಅವರ ಬೆಂಬಲಿಗರ ಕಾರಿನ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಾಟ ನಡೆದಿದ್ದು, ಕಾರಿನ ಗಾಜುಗಳನ್ನು ಜಖಂಗೊಳಿಸಲಾಗಿದೆ. ಜಯಲಲಿತಾ ಅವರಿಗೆ ಮೋಸ ಮಾಡಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದ ಕೆಲವರು ಕಾರಿನ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT