ಓ ಪನ್ನೀರ್ ಸೆಲ್ವಂ ಹಾಗೂ ಅವರ ಬೆಂಬಲಿಗರು 
ಪ್ರಧಾನ ಸುದ್ದಿ

ಪನ್ನೀರ್ ಸೆಲ್ವಂ ಬಣದ ಶಾಸಕರಿಂದ ತಮಿಳುನಾಡು ವಿಧಾನಸಭೆ ಸ್ಪೀಕರ್ ಭೇಟಿ

ತಮಿಳುನಾಡು ನೂತನ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ವಿರುದ್ಧ ಪ್ರತಿತಂತ್ರ ರೂಪಿಸುತ್ತಿರುವ ಮಾಜಿ ಮುಖ್ಯಮಂತ್ರಿ...

ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ವಿರುದ್ಧ ಪ್ರತಿತಂತ್ರ ರೂಪಿಸುತ್ತಿರುವ ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಬಣದ ಕೆಲವು ನಾಯಕರು ಶುಕ್ರವಾರ ವಿಧಾನಸಭೆ ಸ್ಪೀಕರ್ ಪಿ.ಧನಪಾಲ್ ಅವರನ್ನು ಭೇಟಿ ಮಾಡಿದ್ದಾರೆ.
ಪಳನಿಸ್ವಾಮಿ ಅವರು ನಾಳೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಾಗಿರುವ ಹಿನ್ನೆಲೆಯಲ್ಲಿ ಪನ್ನೀರ್ ಸೆಲ್ವಂ ಬಣದ ಶಾಸಕರಾದ ಕೆ ಪಾಂಡಿಯಾರಾಜನ್, ಎಸ್ ಸೆಮ್ಮಲಾಯಿ ಹಾಗೂ ಷನ್ಮುಗನಾಥನ್ ಮತ್ತು ಹಿರಿಯ ನಾಯಕರಾದ ಸಿ ಪೊನ್ನಯನ್ ಅವರು  ಇಂದು ಸ್ಪೀಕರ್ ಭೇಟಿ ಮಾಡಿ ಮಾತುಕತೆ ನಡೆಸಿದೆ. ಆದರೆ ಸ್ಪೀಕರ್ ಭೇಟಿಯ ಬಳಿಕ ಮಾಧ್ಯಮಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಪನ್ನೀರ್ ಸೆಲ್ವಂ ಬಣದಲ್ಲಿ ಎಐಎಡಿಎಂಕೆ ಹತ್ತು ಶಾಸಕರಿದ್ದು, ಅವರು ನಾಳೆ ಮುಖ್ಯಮಂತ್ರಿ ಪಳನಿಸ್ವಾಮಿ ವಿರುದ್ಧ ಮತ ಚಲಾಯಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT