ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಎಐಎಡಿಎಂಕೆ ಪಕ್ಷದಿಂದ ಶಶಿಕಲಾ ಕುಟುಂಬದ ಉಚ್ಛಾಟನೆ!

ಶಶಿಕಲಾ ಬಣ ಪನ್ನೀರ್ ಸೆಲ್ವಂ ಮತ್ತು ಅವರ ಬೆಂಬಲಿತ ಸಂಸದ, ಶಾಸಕರನ್ನು ಉಚ್ಛಾಟಿಸಿದ ಬೆನ್ನಲ್ಲೇ ಪನ್ನೀರ್ ಸೆಲ್ವಂ ಬಣ ಕೂಡ ಇದೀಗ ಶಶಿಕಲಾ ಮತ್ತು ಅವರ ಕುಟುಂಬವನ್ನು ಎಐಎಡಿಎಂಕೆ ಪಕ್ಷದಿಂದ ಉಚ್ಛಾಟನೆ ಮಾಡಿದೆ.

ಚೆನ್ನೈ: ಎಐಎಡಿಎಂಕೆ ಪಕ್ಷದಲ್ಲಿ ಭಿನ್ನಮತ ಸ್ಫೋಟ ಮುಂದುವರೆದಿರುವಂತೆಯೇ ಇತ್ತ ಉಚ್ಛಾಟನಾ ಪರ್ವ ಕೂಡ ಮುಂದುವರೆದಿದೆ. ಈ ಹಿಂದೆ ಶಶಿಕಲಾ ಬಣ ಪನ್ನೀರ್ ಸೆಲ್ವಂ ಮತ್ತು ಅವರ ಬೆಂಬಲಿತ ಸಂಸದ, ಶಾಸಕರನ್ನು  ಉಚ್ಛಾಟಿಸಿದ ಬೆನ್ನಲ್ಲೇ ಪನ್ನೀರ್ ಸೆಲ್ವಂ ಬಣ ಕೂಡ ಇದೀಗ ಶಶಿಕಲಾ ಮತ್ತು ಅವರ ಕುಟುಂಬವನ್ನು ಎಐಎಡಿಎಂಕೆ ಪಕ್ಷದಿಂದ ಉಚ್ಛಾಟನೆ ಮಾಡಿದೆ.

ಎಐಎಡಿಎಂಕೆ ಪಕ್ಷದ ಹಿರಿಯ ಮುಖಂಡ ಹಾಗೂ ಇತ್ತೀಚೆಗಷ್ಟೇ ಪನ್ನೀರ್ ಸೆಲ್ವಂ ಬಣದಿಂದ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಇ ಮಧುಸೂಧನ್ ಅವರು ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಶಶಿಕಲಾ  ಮತ್ತು ಅವರ ಕುಟುಂಬಸ್ಥರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಶಶಿಕಲಾ ಮತ್ತು ಅವರ ಸಹೋದರರಾದ ಟಿಟಿವಿ ದಿನಕರನ್ ಮತ್ತು ವೆಂಕಟೇಶನ್ ಅವರ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಅನೂರ್ಜಿತಗೊಳಿಸುವ ಮೂಲಕ  ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಶಶಿಕಲಾ ಅವರ ಸಹೋದರ ಸಂಬಂಧಿ ಕೂಡ ಆಗಿರುವ ಟಿಟಿವಿ ದಿನಕರನ್ ಇತ್ತೀಚೆಗಷ್ಟೇ ಎಐಎಡಿಎಂಕೆ ಪಕ್ಷ ಉಪ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಈ ನೇಮಕವೇ ಕಾನೂನು ಬಾಹಿರ ಎಂದು ಆರೋಪಿಸಿರುವ ಇ  ಮಧುಸೂಧನ್ ಅವರು, ಕನಿಷ್ಟ ಐದು ವರ್ಷಗಳ ಕಾಲ ಪಕ್ಷದ ಸದಸ್ಯತ್ವ ಹೊಂದಿರುವ ಮತ್ತು ಪಕ್ಷಕ್ಕಾಗಿ ದುಡಿದಿರುವ ವ್ಯಕ್ತಿಗೆ ಮಾತ್ರ ಈ ಹುದ್ದೆಯನ್ನು ನೀಡಬಹುದು. ಆದರೆ ದಿನಕರನ್ ಗೆ ಆ ಅರ್ಹತೆ ಇಲ್ಲ. ಹೀಗಾಗಿ ಅವರ ನೇಮಕ  ಅಸಿಂಧು ಎಂದು ಹೇಳಿದ್ದಾರೆ.

ಪನ್ನೀರ್ ಬಣದಿಂದ ಪಳನಿ ಸ್ವಾಮಿ ವಿರುದ್ಧ ಮತ ಚಲಾಯಿಸಲು ನಿರ್ಧಾರ, ರಾಜ್ಯಾದ್ಯಂತ ಪ್ರತಿಭಟನೆಗೆ ಸಿದ್ಧತೆ!
ಅಂತೆಯೇ ಪಕ್ಷದ ಶಾಸಕರ ವಿರೋಧದ ಹೊರತಾಗಿಯೂ ಅಧಿಕಾರಕ್ಕೇರಿರುವ ಪಳನಿ ಸ್ವಾಮಿ ನೇತೃತ್ವದ ನೂತನ ಸರ್ಕಾರದ ವಿರುದ್ಧ ತಾವು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪನ್ನೀರ್ ಸೆಲ್ವಂ ಬಣದ ಶಾಸಕರು  ಘೋಷಿಸಿದ್ದಾರೆ. ಅಂತೆಯೇ ನಾಳೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಪಳನಿ ಸ್ವಾಮಿ ವಿರುದ್ಧ ಮತ ಚಲಾಯಿಸುವ ಮೂಲಕ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿಯೂ ಪನ್ನೀರ್ ಸೆಲ್ವಂ ಬಣ ಘೋಷಣೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT