ಪ್ರಧಾನ ಸುದ್ದಿ

ಕಾವೇರಿ ನ್ಯಾಯಾಧೀಕರಣದ ಅಧ್ಯಕ್ಷರಾಗಿ ನ್ಯಾ.ಸಪ್ರೆ ನೇಮಕ

Lingaraj Badiger
ನವದೆಹಲಿ: ಕಳೆದ ಹಲವು ವರ್ಷಗಳಿಂದ ಖಾಲಿ ಇದ್ದ ಕಾವೇರಿ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ನೇಮಕ ಮಾಡಿದೆ.
ಸುಪ್ರೀಂ ಕೋರ್ಟ್ ನ್ಯಾಮೂರ್ತಿಯಾಗಿರುವ ಸಪ್ರೆ ಅವರಿಗೆ ಮುಖ್ಯನ್ಯಾಯಮೂರ್ತಿ ಜೆ.ಎಸ್. ಖೇಹರ್ ಅವರು ನೂತನ ಜವಾಬ್ದಾರಿ ನೀಡಿದ್ದು, ಕಾವೇರಿ ನ್ಯಾಯಾಧೀಕರಣದ ಮೇಲಿನ ಭರವಸೆ ಹೆಚ್ಚಾಗಿದೆ.
ಪ್ರಸ್ತುತ ಸುಪ್ರಿಂ ಕೋರ್ಟಿನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಸಪ್ರೆ ಅವರು 2019ರ ಆಗಸ್ಟ್ ತಿಂಗಳಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ. ಈ ಹಿಂದೆ ಮಧ್ಯಪ್ರದೇಶ ಹೈಕೋರ್ಟಿನ ನ್ಯಾಯಮೂರ್ತಿಯಾಗಿದ್ದರು. 
ಕಾವೇರಿ ನ್ಯಾಯಾಧಿಕರಣದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
SCROLL FOR NEXT