ನಂಜನಗೂಡು ಶ್ರೀಕಂಠೇಶ್ವರ ದೇಗುಲ 
ಪ್ರಧಾನ ಸುದ್ದಿ

ದೇಶಾದ್ಯಂತ ಮಹಾಶಿವರಾತ್ರಿ ಆಚರಣೆ, ಶಿವನ ದೇಗುಲಗಳ ಮುಂದೆ ಭಾರಿ ಜನಸ್ತೋಮ

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇಶಾದ್ಯಂತ ಭಕ್ತರು ಶಿವನ ಆರಾಧನೆಯಲ್ಲಿ ತೊಡಗಿದ್ದು, ವಿವಿಧ ಶಿವನ ದೇವಾಲಯದ ಎದುರು ಸರತಿ ಸಾಲಲ್ಲಿ ನಿಂತು ಪರಮೇಶ್ವರನ ದರ್ಶನ ಪಡೆಯುತ್ತಿದ್ದಾರೆ.

ನವದೆಹಲಿ: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇಶಾದ್ಯಂತ ಭಕ್ತರು ಶಿವನ ಆರಾಧನೆಯಲ್ಲಿ ತೊಡಗಿದ್ದು, ವಿವಿಧ ಶಿವನ ದೇವಾಲಯದ ಎದುರು ಸರತಿ ಸಾಲಲ್ಲಿ ನಿಂತು ಪರಮೇಶ್ವರನ ದರ್ಶನ ಪಡೆಯುತ್ತಿದ್ದಾರೆ.

ದೇಶದ ಪ್ರಮುಖ ಈಶ್ವರನ ದೇವಾಲಯಗಳಾದ ಗುಜರಾತ್ ನ ಸೋಮನಾಥ್ ದೇಗುಲ, ಆಂಧ್ರಪ್ರದೇಶದ ಶ್ರೀಶೈಲಂನ ಮಲ್ಲಿಕಾರ್ಜುನ ಸ್ವಾಮಿ ದೇಗುಲ, ಉಜ್ಜೈನಿಯ ಮಹಾಕಾಳೇಶ್ವರ ದೇಗುಲ, ಇಂದೋರ್ ನ ಓಂಕಾರೇಶ್ವರ  ದೇಗುಲ, ಉತ್ತರಾಖಂಡದ ಕೇದರಾನಾಥ ದೇಗುಲ, ನಾಸಿಕ್ ನಲ್ಲಿರುವ ತ್ರಯಂಬಕೇಶ್ವರ ದೇಗುಲ, ತಮಿಳುನಾಡಿನ ರಾಮೇಶ್ವರಂ ನಲ್ಲಿರುವ ರಾಮನಾಥ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.

ಅಂತೆಯೇ ಕರ್ನಾಟಕದ ಪ್ರಮುಖ ಈಶ್ವರನ ದೇಗುಲಗಳಾದ ಮುರುಡೇಶ್ವರ ದೇಗುಲ, ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನ, ಧರ್ಮಸ್ಥಳ ಶ್ರೀ ಮಂಜುನಾಥ ದೇವಾಲಯ, ಕದ್ರಿ ಮಂಜುನಾಥ ದೇವಾಲಯ, ಮಲೈ  ಮಹದೇಶ್ವ ದೇವಾಲಯ, ಗೋಕರ್ಣ ಮಹಾಬಲೇಶ್ವರ ದೇಗುಲ ಮತ್ತು ಕುದ್ರೋಳಿ ಗೋಕರ್ಣನಾಥೇಶ್ವರ ದೇಗುಲ ಸೇರಿದಂತೆ ವಿವಿಧ ದೇಗುಲಗಳ ಮುಂದೆ ಸಾವಿರಾರು ಭಕ್ತರು ನೆರೆದಿದ್ದು, ಪರಮೇಶ್ವರನ ದರ್ಶನಕ್ಕಾಗಿ ಸರತಿ  ಸಾಲಲ್ಲಿ ನಿಂತಿದ್ದಾರೆ.

ಮಹಾಶಿವರಾತ್ರಿ ಪ್ರಯುಕ್ತ ಹಲವು ದೇಗುಳಲ್ಲಿ ಇಂದು ಮುಂಜಾನೆಯಿಂದ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ರಾತ್ರಿ ಪೂರ್ತಿ ಜಾಗರಣೆ ಮತ್ತು ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.  ಇನ್ನು ಬೆಂಗಳೂರಿನ ವಿಮಾನ ನಿಲ್ದಾಣದ ರಸ್ತೆಯಲ್ಲಿರುವ ಬೃಹತ್ ಶಿವನ ಮೂರ್ತಿಯ ದೇವಾಲಯದಲ್ಲಿ ಇಂದು ವಿಶೇಷ ಪೂಜೆ ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಿರ್ಸಿ ವೃತ್ತದ ಬಳಿ ಇರುವ ಮಹದೇಶ್ವರ ಸ್ವಾಮಿ  ದೇಗುಲದಲ್ಲಿ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT