ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮುಂಬೈ ಮೇಯರ್ ಸ್ಥಾನಕ್ಕೆ ಶಿವಸೇನೆಗೆ ಬೆಂಬಲ ಚರ್ಚೆ; ಕಾಂಗ್ರೆಸ್ ನಲ್ಲಿ ಒಡಕು

ಬೃಹಾನ್ ಮುಂಬೈ ನಗರಸಭಾ (ಬಿಎಂಸಿ) ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬರದ ಹಿನ್ನಲೆಯಲ್ಲಿ, ಮೇಯರ್ ಸ್ಥಾನಕ್ಕೆ ಶಿವಸೇನೆಗೆ ಬೆಂಬಲ ಸೂಚಿಸುವ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ಒಡೆದ

ಮುಂಬೈ: ಬೃಹಾನ್ ಮುಂಬೈ ನಗರಸಭಾ (ಬಿಎಂಸಿ) ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬರದ ಹಿನ್ನಲೆಯಲ್ಲಿ, ಮೇಯರ್ ಸ್ಥಾನಕ್ಕೆ ಶಿವಸೇನೆಗೆ ಬೆಂಬಲ ಸೂಚಿಸುವ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ಒಡೆದ ಮನೆಯಾಗಿದೆ. 
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಗುರುದಾಸ್ ಕಾಮತ್ ಶಿವಸೇನೆಗೆ ಯಾವುದೇ ರೀತಿಯ ಬೆಂಬಲ ನೀಡುವುದನ್ನು ಉಗ್ರವಾಗಿ ವಿರೋಧಿಸಿದ್ದಾರೆ. 
"ಈ ಎರಡು ಕೇಸರಿ ಪಕ್ಷಗಳ ಒಡೆಯುವ ನೀತಿಯ ವಿರುದ್ಧ ಉದ್ದಕ್ಕೂ ಹೋರಾಡುತ್ತಾ ಬಂದಿದ್ದೇವೆ ಮತ್ತು ಈಗ ಅವರ ಜೊತಿಗಿನ ಹೊಂದಾಣಿಕೆಯನ್ನು ಜನ ಎಂದಿಗೂ ಕ್ಷಮಿಸಲಾರರು" ಎಂದು ಕಾಮತ್ ಹೇಳಿಕೆ ನೀಡಿದ್ದಾರೆ. 
"ನನ್ನ ಅಭಿಪ್ರಾಯವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೂ ತಿಳಿಸಿದ್ದೇನೆ. ಬಿಎಂಸಿಯಲ್ಲಿ ಶಿವಸೇನೆಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸುವ ಯಾವುದೇ ಚರ್ಚೆಯನ್ನು ನಾನು ವಿರೋಧಿಸುತ್ತೇನೆ" ಎಂದು ಮಾಜಿ ಕೇಂದ್ರ ಸಚಿವ ಹೇಳಿದ್ದಾರೆ. 
ಶಿವಸೇನೆ ಮತ್ತು ಭಾರತೀಯ ಜನತಾ ಪಕ್ಷ ತಮ್ಮ ವಿವಾದಗಳನ್ನು ಬಗೆಹರಿಸಿಕೊಂಡು, ಅಧಿಕಾರದ ಆಸೆಯಲ್ಲಿ ಎರಡು ಪಕ್ಷಗಳು ಬಯಲಾಗುವುದಕ್ಕೆ ಬಿಡಬೇಕು ಎಂದು ಕೂಡ ಅವರು ಹೇಳಿದ್ದಾರೆ. 
ಬಿಎಂಸಿಯಲ್ಲಿ ಶಿವಸೇನೆ ಬಿಜೆಪಿ ಮೈತ್ರಿ ಚರ್ಚೆ ಮುರಿದುಬಿದ್ದರೆ, ಶಿವಸೇನೆ ಮೇಯರ್ ಅಭ್ಯರ್ಥಿಗೆ ಬೆಂಬಲಿಸುವ ಮಾತುಕತೆ ಮಹಾರಾಷ್ಟ್ರ ಕಾಂಗ್ರೆಸ್ ನಲ್ಲಿ ಜಾರಿಯಲ್ಲಿದೆ ಎಂಬ ಸುದ್ದಿಯ ಹಿನ್ನಲೆಯಲ್ಲಿ ಕಾಮತ್ ಈ ಬಾಂಬ್ ಸಿಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT