ಪುಣೆ ವಿಶ್ವವಿದ್ಯಾಲಯ 
ಪ್ರಧಾನ ಸುದ್ದಿ

ಪುಣೆ ವಿಶ್ವವಿದ್ಯಾಲಯ ಘರ್ಷಣೆ ಪ್ರಕರಣ: 12 ಕಾರ್ಯಕರ್ತರ ಬಂಧನ

ಪುಣೆ ವಿಶ್ವವಿದ್ಯಾಲಯದಲ್ಲ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದೆತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ 12 ಮಂದಿ ಕಾರ್ಯಕರ್ತರನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದೆ...

ಪುಣೆ: ಪುಣೆ ವಿಶ್ವವಿದ್ಯಾಲಯದಲ್ಲ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದೆತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ 12 ಮಂದಿ ಕಾರ್ಯಕರ್ತರನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದೆ. 
ದೆಹಲಿಯ ರಮ್ಜಾಸ್ ಕಾಲೇಜಿನ ಕಾರ್ಯಕ್ರಮವೊಂದಕ್ಕೆ ಜೆಎನ್ ಯು ವಿದ್ಯಾರ್ಥಿ ಉಮರ್ ಖಾಲಿದ್ ನನ್ನು ಆಹ್ನಾನಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಎಬಿವಿಪಿ ಕಾರ್ಯಕರ್ತರು ಫೆ.24 ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಇದಕ್ಕೆ ಪ್ರತಿಯಾಗಿ ಎಸ್ಎಫ್ಐ ಕಾರ್ಯಕರ್ತರು ಎಬಿವಿಪಿ ವಿರುದ್ಧ ಪೋಸ್ಟರ್ ಗಳನ್ನು ವಿವಿಯ ಆವರಣದಲ್ಲಿ ಅಂಟಿಸಿದ್ದರು. ಈ ಪೋಸ್ಟರ್ ಗಳಿಗೆ ಎಬಿವಿಪಿ ವಿರೋಧ ವ್ಯಕ್ತಪಡಿಸಿತ್ತು. ನಂತರ ಎರಡೂ ಸಂಘಟನೆಗಳ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟು, ಕೆಲ ಕಾಲ ವಿವಿಯ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. 
ಪ್ರಕರಣ ಸಂಬಂಧ 12 ಮಂದಿ ಎಬಿವಿಪಿ ಹಾಗೂ ಎಸ್ಎಫ್ಐ ಕಾರ್ಯಕರ್ತನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ನಂತರ ಜಾಮೀನಿನ ಮೇಲೆ ಕಾರ್ಯಕರ್ತರು ಬಿಡುಗಡೆಯಾಗಿದ್ದರು. 
ಎಬಿವಿಪಿಯ 7 ಹಾಗೂ ಎಸ್ಎಫ್ಐ ನ 5 ಮಂದಿ ಕಾರ್ಯಕರ್ತನ್ನು ನಾವು ಬಂಧನಕ್ಕೊಳಪಡಿಸಿದ್ದೆವು. ಬಂಧಿಸಿದ ಬಳಿದ ನ್ಯಾಯಾಲಯದ ಎದುರು ಹಾಜರು ಪಡಿಸಲಾಗಿತ್ತು. ಜಾಮೀನಿನ ಮೇಲೆ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT