ಹೈದರಾಬಾದ್: ಮಾಜಿ ಪ್ರಧಾನಿಗಳಾದ ದಿ. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಸರ್ಕಾರದಲ್ಲಿ ಪ್ರಭಾವಿ ಕಾಂಗ್ರೆಸ್ ನಾಯಕರಾಗಿದ್ದ ಮಾಜಿ ಕೇಂದ್ರ ಸಚಿವ ಪಿ.ಶಿವಶಂಕರ್ ಅವರು ಸೋಮವಾರ ನಿಧನರಾಗಿದ್ದಾರೆ.
90 ವರ್ಷದ ಶಿವಶಂಕರ್ ಅವರು ಇಂದು ಬೆಳಗ್ಗೆ ವಯೋ ಸಹದ ಕಾಯಿಲಿಯಿಂದ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ವಿನಯ್ ಕುಮಾರ್ ಅವರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ಶಿವಶಂಕರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ವಕೀಲರಾಗಿ ಕೆಲಸ ಮಾಡಿದ್ದರು ಎಂದು ಅವರು ಹೇಳಿದ್ದಾರೆ.
ಇಂದಿರಾ ಗಾಂಧಿ ಅವರ ಮನವಿ ಮೆರೆಗೆ ಶಿವಶಂಕರ್ ಅವರು ತುರ್ತು ಪರಿಸ್ಥಿತಿ ಪ್ರಕರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.
1978ರಲ್ಲಿ ಹಾಗೂ 1980ರಲ್ಲಿ ಸಿಕಿಂದರಾಬಾದ್ ಸಂಸದರಾಗಿ ಆಯ್ಕೆಯಾಗಿದ್ದರು. ಅಲ್ಲದೆ ಕೇಂದ್ರ ಕಾನೂನು ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos