ಕೇಂದ್ರ ಸಚಿವೆ ಉಮಾ ಭಾರತಿ 
ಪ್ರಧಾನ ಸುದ್ದಿ

ಉತ್ತರಪ್ರದೇಶದಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಇದ್ದದ್ದು ಪ್ರಮಾದ: ಉಮಾ ಭಾರತಿ

ಜಾರಿಯಲ್ಲಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಇರುವುದು ಅತಿ ದೊಡ್ಡ ಪ್ರಮಾದ ಎಂದು ಕೇಂದ್ರ ಸಚಿವೆ ಉಮಾ ಭಾರತಿ

ನವದೆಹಲಿ: ಜಾರಿಯಲ್ಲಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಇರುವುದು ಅತಿ ದೊಡ್ಡ ಪ್ರಮಾದ ಎಂದು ಕೇಂದ್ರ ಸಚಿವೆ ಉಮಾ ಭಾರತಿ ಸೋಮವಾರ ಹೇಳಿದ್ದಾರೆ. 
"ನಾವು ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಸದೆ ಇರುವುದಕ್ಕೆ ನನಗೆ ಬೇಸರವಾಗಿದೆ. ನಾನು ಅಮಿತ್ ಷಾ (ಬಿಜೆಪಿ ರಾಷ್ಟ್ರಾಧ್ಯಕ್ಷ) ಮತ್ತು ಕೇಶವ್ ಪ್ರಸಾದ್ ಮೌರ್ಯ (ಬಿಜೆಪಿ ರಾಜ್ಯ ಅಧ್ಯಕ್ಷ) ಅವರೊಂದಿಗೆ, ವಿಧಾನಸಭೆಗೆ ಮುಸ್ಲಿಮರನ್ನು ಕರೆತರುವ ಬಗ್ಗೆ ಚರ್ಚಿಸಿದ್ದೆ" ಎಂದು ಉಮಾಭಾರತಿ ಸುದ್ದಿವಾಹಿನಿಯೊಂದಕ್ಕೆ ಹೇಳಿದ್ದಾರೆ. 
"ನಾವು (ಮುಸ್ಲಿಮರಿಗೆ) ಟಿಕೆಟ್ ಕೊಡಬಹುದಿತ್ತು ಎಂದು ರಾಜನಾಥ್ ಅವರು ಸರಿಯಾಗಿ ಹೇಳಿದ್ದಾರೆ" ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಯನ್ನುದ್ದೇಶಿಸಿ ಉಮಾ ಭಾರತಿ ಹೇಳಿದ್ದಾರೆ. 
ಉಮಾ ಭಾರತಿ ಅವರ ಹೇಳಿಕೆಯನ್ನು ಅವರ ಸಹೋದ್ಯೋಗಿ ಪ್ರಶ್ನಿಸಿದ್ದಾರೆ. ಮುಸ್ಲಿಮರನ್ನು ಕಣಕ್ಕಿಳಿಸುವ ಹಿಂದಿನ ತರ್ಕವೇನು ಎಂದು ಕೇಳಿರುವ ರಾಜ್ಯಸಭಾ ಸದಸ್ಯ ವಿನಯ್ ಕಟಿಯಾರ್ "ಮುಸ್ಲಿಮರು ನಮಗೆ ಮತ ನೀಡದೆ ಇರುವಾಗ, ಅವರಿಕೆ ಟಿಕೆಟ್ ಏಕೆ ನೀಡಬೇಕು?" ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT