ಅಮೆರಿಕಾದಲ್ಲಿ ಜನಾಂಗೀಯ ದ್ವೇಷಕ್ಕೆ ಹತ್ಯೆಯಾದ ಭಾರತೀಯ ಟೆಕ್ಕಿ ಶ್ರೀನಿವಾಸ್ ಕುಚಿಬೊಟ್ಲಾ 
ಪ್ರಧಾನ ಸುದ್ದಿ

ಜನಾಂಗೀಯ ದ್ವೇಷಕ್ಕೆ ಹತ್ಯೆಯಾದ ಭಾರತೀಯ ಟೆಕ್ಕಿ ಮೃತ ದೇಹ ಹೈದರಾಬಾದ್ ಗೆ

ಅಮೆರಿಕಾದಲ್ಲಿ ಜನಾಂಗೀಯ ದ್ವೇಷಕ್ಕೆ ಹತ್ಯೆಯಾದ ಭಾರತೀಯ ಮೂಲದ ಎಂಜಿನಿಯರ್ ಶ್ರೀನಿವಾಸ್ ಕುಚಿಬೊಟ್ಲಾ ಅವರ ದೇಹವನ್ನು ಸೋಮವಾರ ರಾತ್ರಿ ಹೈದರಾಬಾದ್

ಹೈದರಾಬಾದ್: ಅಮೆರಿಕಾದಲ್ಲಿ ಜನಾಂಗೀಯ ದ್ವೇಷಕ್ಕೆ ಹತ್ಯೆಯಾದ ಭಾರತೀಯ ಮೂಲದ ಎಂಜಿನಿಯರ್ ಶ್ರೀನಿವಾಸ್ ಕುಚಿಬೊಟ್ಲಾ ಅವರ ದೇಹವನ್ನು ಸೋಮವಾರ ರಾತ್ರಿ ಹೈದರಾಬಾದ್ ಗೆ ತರಲಾಗುತ್ತಿದೆ. 
ಅಮೆರಿಕಾ ಮಾಜಿ ನೌಕಾ ಸಿಬ್ಬಂದಿ ಆಡಮ್ ಡಬ್ಲ್ಯೂ ಪುರೀಂಟನ್ ಅವರು ಹಾರಿಸಿದ ಗುಂಡೇಟಿಗೆ ಬಲಿಯಾದ ಶ್ರೀನಿವಾಸ್ ಅವರ ದೇಹವನ್ನು ಭಾರತಕ್ಕೆ ತರಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವ್ಯವಸ್ಥೆ ಮಾಡಿದೆ. ಅಮೆರಿಕಾದ ಕಾನ್ಸಾಸ್ ನಲ್ಲಿ ಫೆಬ್ರವರಿ ೨೨ ರಂದು ನಡೆದ ಈ ಗುಂಡಿನ ದಾಳಿಯಲ್ಲಿ ಶ್ರೀನಿವಾಸ್ ಮೃತಪಟ್ಟಿದ್ದರು ಮತ್ತು ಅಲೋಕ್ ಮದಾಸನಿ ಎಂಬ ಮತ್ತೊಬ್ಬ ಎಂಜಿನಿಯರ್ ಗಾಯಗೊಂಡಿದ್ದರು. 
ಏರ್ ಇಂಡಿಯಾ ವಿಮಾನದಲ್ಲಿ ಸೋಮವಾರ ರಾತ್ರಿ ಹೈದರಾಬಾದ ವಿಮಾನನಿಲ್ದಾಣಕ್ಕೆ ದೇಹವನ್ನು ತರುವ ಸಾಧ್ಯತೆಯಿದೆ. ಶ್ರೀನಿವಾಸ್ ಅವರ ಪತ್ನಿ ಸುನನ್ಯ ದುಮಲಾ, ಅವರ ಸಹೋದರ ಮತ್ತಿತರ ಬಂಧುಗಳು ಕೂಡ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದು, ಅಂತಿಮ ಸಂಸ್ಕಾರ ಮಂಗಳವಾರ ಜುಬಿಲಿ ಹಿಲ್ಸ್ ನಲ್ಲಿ ನಡೆಯಲಿದೆ ಎಂದು ಕೌಟುಂಬಿಕ ಸದಸ್ಯರು ತಿಳಿಸಿದ್ದಾರೆ. 
ನಗರದ ಹೊರವಲಯದ ಬಾಚುಪಳ್ಳಿಯಲ್ಲಿರುವ ಶ್ರೀನಿವಾಸ್ ಅವರ ಮನೆಗೆ ದುಃಖತಪ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದಾರೆ. ಬಂಧುಗಳು, ಗೆಳೆಯರು ಮತ್ತು ವಿವಿಧ ಪಕ್ಷಗಳ ಮುಖಂಡರು ಶ್ರೀನಿವಾಸ್ ಅವರ ಪೋಷಕರು ಮತ್ತು ಹತ್ತಿರದ ಬಂಧುಗಳಿಗೆ ಸಮಾಧಾನ ಹೇಳಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. 
ಕೇಂದ್ರ ಸಚಿವರಾದ ವೆಂಕಯ್ಯ ನಾಯ್ಡು ಮತ್ತು ಬಂಡಾರು ದತ್ತಾತ್ರೇಯ ಕೂಡ ಶನಿವಾರ ಶ್ರೀನಿವಾಸ್ ಮನೆಗೆ ಭೇಟಿ ನೀಡಿ ದುಃಖದಲ್ಲಿ ಮುಳುಗಿರುವ ಪೋಷಕರಾದ ಕೆ ಮಧುಸೂಧನ್ ಶಾಸ್ತ್ರಿ ಮತ್ತು ಪರ್ವತ ವರ್ಧಿನಿ ಅವರನ್ನು ಸಂತೈಸಲು ಪ್ರಯತ್ನಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT