ಅಮೆರಿಕಾದಲ್ಲಿ ಜನಾಂಗೀಯ ದ್ವೇಷಕ್ಕೆ ಹತ್ಯೆಯಾದ ಭಾರತೀಯ ಟೆಕ್ಕಿ ಶ್ರೀನಿವಾಸ್ ಕುಚಿಬೊಟ್ಲಾ 
ಪ್ರಧಾನ ಸುದ್ದಿ

ಜನಾಂಗೀಯ ದ್ವೇಷಕ್ಕೆ ಹತ್ಯೆಯಾದ ಭಾರತೀಯ ಟೆಕ್ಕಿ ಮೃತ ದೇಹ ಹೈದರಾಬಾದ್ ಗೆ

ಅಮೆರಿಕಾದಲ್ಲಿ ಜನಾಂಗೀಯ ದ್ವೇಷಕ್ಕೆ ಹತ್ಯೆಯಾದ ಭಾರತೀಯ ಮೂಲದ ಎಂಜಿನಿಯರ್ ಶ್ರೀನಿವಾಸ್ ಕುಚಿಬೊಟ್ಲಾ ಅವರ ದೇಹವನ್ನು ಸೋಮವಾರ ರಾತ್ರಿ ಹೈದರಾಬಾದ್

ಹೈದರಾಬಾದ್: ಅಮೆರಿಕಾದಲ್ಲಿ ಜನಾಂಗೀಯ ದ್ವೇಷಕ್ಕೆ ಹತ್ಯೆಯಾದ ಭಾರತೀಯ ಮೂಲದ ಎಂಜಿನಿಯರ್ ಶ್ರೀನಿವಾಸ್ ಕುಚಿಬೊಟ್ಲಾ ಅವರ ದೇಹವನ್ನು ಸೋಮವಾರ ರಾತ್ರಿ ಹೈದರಾಬಾದ್ ಗೆ ತರಲಾಗುತ್ತಿದೆ. 
ಅಮೆರಿಕಾ ಮಾಜಿ ನೌಕಾ ಸಿಬ್ಬಂದಿ ಆಡಮ್ ಡಬ್ಲ್ಯೂ ಪುರೀಂಟನ್ ಅವರು ಹಾರಿಸಿದ ಗುಂಡೇಟಿಗೆ ಬಲಿಯಾದ ಶ್ರೀನಿವಾಸ್ ಅವರ ದೇಹವನ್ನು ಭಾರತಕ್ಕೆ ತರಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವ್ಯವಸ್ಥೆ ಮಾಡಿದೆ. ಅಮೆರಿಕಾದ ಕಾನ್ಸಾಸ್ ನಲ್ಲಿ ಫೆಬ್ರವರಿ ೨೨ ರಂದು ನಡೆದ ಈ ಗುಂಡಿನ ದಾಳಿಯಲ್ಲಿ ಶ್ರೀನಿವಾಸ್ ಮೃತಪಟ್ಟಿದ್ದರು ಮತ್ತು ಅಲೋಕ್ ಮದಾಸನಿ ಎಂಬ ಮತ್ತೊಬ್ಬ ಎಂಜಿನಿಯರ್ ಗಾಯಗೊಂಡಿದ್ದರು. 
ಏರ್ ಇಂಡಿಯಾ ವಿಮಾನದಲ್ಲಿ ಸೋಮವಾರ ರಾತ್ರಿ ಹೈದರಾಬಾದ ವಿಮಾನನಿಲ್ದಾಣಕ್ಕೆ ದೇಹವನ್ನು ತರುವ ಸಾಧ್ಯತೆಯಿದೆ. ಶ್ರೀನಿವಾಸ್ ಅವರ ಪತ್ನಿ ಸುನನ್ಯ ದುಮಲಾ, ಅವರ ಸಹೋದರ ಮತ್ತಿತರ ಬಂಧುಗಳು ಕೂಡ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದು, ಅಂತಿಮ ಸಂಸ್ಕಾರ ಮಂಗಳವಾರ ಜುಬಿಲಿ ಹಿಲ್ಸ್ ನಲ್ಲಿ ನಡೆಯಲಿದೆ ಎಂದು ಕೌಟುಂಬಿಕ ಸದಸ್ಯರು ತಿಳಿಸಿದ್ದಾರೆ. 
ನಗರದ ಹೊರವಲಯದ ಬಾಚುಪಳ್ಳಿಯಲ್ಲಿರುವ ಶ್ರೀನಿವಾಸ್ ಅವರ ಮನೆಗೆ ದುಃಖತಪ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದಾರೆ. ಬಂಧುಗಳು, ಗೆಳೆಯರು ಮತ್ತು ವಿವಿಧ ಪಕ್ಷಗಳ ಮುಖಂಡರು ಶ್ರೀನಿವಾಸ್ ಅವರ ಪೋಷಕರು ಮತ್ತು ಹತ್ತಿರದ ಬಂಧುಗಳಿಗೆ ಸಮಾಧಾನ ಹೇಳಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. 
ಕೇಂದ್ರ ಸಚಿವರಾದ ವೆಂಕಯ್ಯ ನಾಯ್ಡು ಮತ್ತು ಬಂಡಾರು ದತ್ತಾತ್ರೇಯ ಕೂಡ ಶನಿವಾರ ಶ್ರೀನಿವಾಸ್ ಮನೆಗೆ ಭೇಟಿ ನೀಡಿ ದುಃಖದಲ್ಲಿ ಮುಳುಗಿರುವ ಪೋಷಕರಾದ ಕೆ ಮಧುಸೂಧನ್ ಶಾಸ್ತ್ರಿ ಮತ್ತು ಪರ್ವತ ವರ್ಧಿನಿ ಅವರನ್ನು ಸಂತೈಸಲು ಪ್ರಯತ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT