ಮಕ್ಕಳ ಕಳ್ಳಸಾಗಾಣಿಕೆ ಆರೋಪದಲ್ಲಿ ಬಂಧನಗೊಂಡಿರುವ ಬಿಜೆಪಿ ನಾಯಕಿ ಜೂಹಿ ಚೌಧರಿ 
ಪ್ರಧಾನ ಸುದ್ದಿ

ಮಮತಾ ಸರ್ಕಾರದ ಮೇಲೆ ನಂಬಿಕೆಯಿಲ್ಲ; ಮಕ್ಕಳ ಕಳ್ಳ ಸಾಗಾಣಿಕೆ ಬಗ್ಗೆ ಬಿಜೆಪಿ

ಪಶ್ಚಿಮ ಬಂಗಾಳದಲ್ಲಿ ಮಕ್ಕಳ ಕಳ್ಳಸಾಗಾಣಿಕೆ ಆರೋಪದಲ್ಲಿ ಬಿಜೆಪಿ ನಾಯಕಿ ಜೂಹಿ ಚೌಧರಿ ಬಂಧನಗೊಂಡಿರುವ ಹಿನ್ನಲೆಯಲ್ಲಿ, ಪೋಲೀಸರ ಕ್ರಮದ ಬಗ್ಗೆ ಬುಧವಾರ ಅನುಮಾನ ವ್ಯಕ್ತಪಡಿಸಿರುವ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮಕ್ಕಳ ಕಳ್ಳಸಾಗಾಣಿಕೆ ಆರೋಪದಲ್ಲಿ ಬಿಜೆಪಿ ನಾಯಕಿ ಜೂಹಿ ಚೌಧರಿ ಬಂಧನಗೊಂಡಿರುವ ಹಿನ್ನಲೆಯಲ್ಲಿ, ಪೋಲೀಸರ ಕ್ರಮದ ಬಗ್ಗೆ ಬುಧವಾರ ಅನುಮಾನ ವ್ಯಕ್ತಪಡಿಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ, ಕೇಂದ್ರ ತನಿಖಾ ದಳ ಇದರ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. 
೧೭ ಮಕ್ಕಳನ್ನು ಕಳ್ಳ ಸಾಗಾಣಿಕೆ ಮಾಡಿದ ಆರೋಪದಲ್ಲಿ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಚೌಧರಿ ಅವರನ್ನು ಪಶ್ಚಿಮ ಬಂಗಾಳದ ದಾರ್ಜಿಲಿಂಗ್ ಜಿಲ್ಲೆಯಿಂದ ಮಂಗಳವಾರ ಬಂಧಿಸಲಾಗಿತ್ತು. 
"ಮಮತಾ ಬ್ಯಾನರ್ಜಿ ಅವರ ಸರ್ಕಾರದ ಅಧೀರದಲ್ಲಿ ಪೊಲೀಸರು ರಾಜಕೀಯ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪೊಲೀಸ್ ಠಾಣೆಗಳು ಪಕ್ಷದ ಕಚೇರಿಗಳಾಗಿ ಬದಲಾಗಿವೆ ಮತ್ತು ಅಧಿಕಾರಿಗಳು ಪಕ್ಷದ (ಆಡಳಿತ ತೃಣಮೂಲ ಕಾಂಗ್ರೆಸ್) ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ" ಎಂದು ವಿಜಯವರ್ಗೀಯ ದೂರಿದ್ದಾರೆ. 
ನೌಕರಿ ಅಪೇಕ್ಷಿತರಿಂದ ಹಣವನ್ನು ವಸೂಲಿ ಮಾಡಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷ ಜಯಪ್ರಕಾಶ್ ಮಜುಂದಾರ್ ಅವರನ್ನು ಈ ಹಿಂದೆ ಬಂಧಿಸಿದ್ದರ ಬಗ್ಗೆ ಉಲ್ಲೇಖಿಸಿರುವ ವಿಜಯವರ್ಗೀಯ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಕಿರುಕುಳ ಕೊಡಲೆಂದೇ ಇದನ್ನು ಅಸ್ತ್ರವಾಗಿ ತೃಣಮೂಲ ಕಾಂಗ್ರೆಸ್ ಪಕ್ಷ ಬಳಸುತ್ತಿದೆ ಎಂದು ದೂರಿದ್ದಾರೆ. 
"ನನಗೆ ಪೊಲೀಸ್ ತನಿಖೆಯಲ್ಲಿ ನಂಬಿಕೆಯಿಲ್ಲ. ಒಂದರ ನಂತರ ಒಂದು ಹಗರಣವನ್ನು ಹುಟ್ಟುಹಾಕುವ ಪ್ರಯತ್ನದಲ್ಲಿ ನಮ್ಮ ಪಕ್ಷದ ನಾಯಕರನ್ನು ಸುಳ್ಳು ಸುಳ್ಳೇ ಸಿಕ್ಕಿಸಿ ಬಂಧಿಸಲಾಗುತ್ತಿದೆ. ನಾವು ಈ ಸರ್ಕಾರವನ್ನಾಗಲಿ (ಪಶ್ಚಿಮ ಬಂಗಾಳ) ಅಥವಾ ಪೊಲೀಸರನ್ನಾಗಲಿ ನಂಬುವುದಿಲ್ಲ" ಎಂದು ಅವರು ಹೇಳಿದ್ದಾರೆ. 
"ಅವರು ಯಾವುದೇ ಎಲ್ಲೆಗೆ ಹೋಗಲಿ. ನಮಗೆ ಕೇಂದ್ರ ತನಿಖಾ ದಳ ಈ ಪ್ರಕರಣವನ್ನು ತನಿಖೆ ಮಾಡಬೇಕಿದೆ" ಎಂದಿರುವ ವಿಜಯವರ್ಗೀಯ ತಮ್ಮ ಪಕ್ಷದ ಯಾರಾದರೂ ಈ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT