ಮಕ್ಕಳ ಕಳ್ಳಸಾಗಾಣಿಕೆ ಆರೋಪದಲ್ಲಿ ಬಂಧನಗೊಂಡಿರುವ ಬಿಜೆಪಿ ನಾಯಕಿ ಜೂಹಿ ಚೌಧರಿ 
ಪ್ರಧಾನ ಸುದ್ದಿ

ಮಮತಾ ಸರ್ಕಾರದ ಮೇಲೆ ನಂಬಿಕೆಯಿಲ್ಲ; ಮಕ್ಕಳ ಕಳ್ಳ ಸಾಗಾಣಿಕೆ ಬಗ್ಗೆ ಬಿಜೆಪಿ

ಪಶ್ಚಿಮ ಬಂಗಾಳದಲ್ಲಿ ಮಕ್ಕಳ ಕಳ್ಳಸಾಗಾಣಿಕೆ ಆರೋಪದಲ್ಲಿ ಬಿಜೆಪಿ ನಾಯಕಿ ಜೂಹಿ ಚೌಧರಿ ಬಂಧನಗೊಂಡಿರುವ ಹಿನ್ನಲೆಯಲ್ಲಿ, ಪೋಲೀಸರ ಕ್ರಮದ ಬಗ್ಗೆ ಬುಧವಾರ ಅನುಮಾನ ವ್ಯಕ್ತಪಡಿಸಿರುವ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮಕ್ಕಳ ಕಳ್ಳಸಾಗಾಣಿಕೆ ಆರೋಪದಲ್ಲಿ ಬಿಜೆಪಿ ನಾಯಕಿ ಜೂಹಿ ಚೌಧರಿ ಬಂಧನಗೊಂಡಿರುವ ಹಿನ್ನಲೆಯಲ್ಲಿ, ಪೋಲೀಸರ ಕ್ರಮದ ಬಗ್ಗೆ ಬುಧವಾರ ಅನುಮಾನ ವ್ಯಕ್ತಪಡಿಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ, ಕೇಂದ್ರ ತನಿಖಾ ದಳ ಇದರ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. 
೧೭ ಮಕ್ಕಳನ್ನು ಕಳ್ಳ ಸಾಗಾಣಿಕೆ ಮಾಡಿದ ಆರೋಪದಲ್ಲಿ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಚೌಧರಿ ಅವರನ್ನು ಪಶ್ಚಿಮ ಬಂಗಾಳದ ದಾರ್ಜಿಲಿಂಗ್ ಜಿಲ್ಲೆಯಿಂದ ಮಂಗಳವಾರ ಬಂಧಿಸಲಾಗಿತ್ತು. 
"ಮಮತಾ ಬ್ಯಾನರ್ಜಿ ಅವರ ಸರ್ಕಾರದ ಅಧೀರದಲ್ಲಿ ಪೊಲೀಸರು ರಾಜಕೀಯ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪೊಲೀಸ್ ಠಾಣೆಗಳು ಪಕ್ಷದ ಕಚೇರಿಗಳಾಗಿ ಬದಲಾಗಿವೆ ಮತ್ತು ಅಧಿಕಾರಿಗಳು ಪಕ್ಷದ (ಆಡಳಿತ ತೃಣಮೂಲ ಕಾಂಗ್ರೆಸ್) ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ" ಎಂದು ವಿಜಯವರ್ಗೀಯ ದೂರಿದ್ದಾರೆ. 
ನೌಕರಿ ಅಪೇಕ್ಷಿತರಿಂದ ಹಣವನ್ನು ವಸೂಲಿ ಮಾಡಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷ ಜಯಪ್ರಕಾಶ್ ಮಜುಂದಾರ್ ಅವರನ್ನು ಈ ಹಿಂದೆ ಬಂಧಿಸಿದ್ದರ ಬಗ್ಗೆ ಉಲ್ಲೇಖಿಸಿರುವ ವಿಜಯವರ್ಗೀಯ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಕಿರುಕುಳ ಕೊಡಲೆಂದೇ ಇದನ್ನು ಅಸ್ತ್ರವಾಗಿ ತೃಣಮೂಲ ಕಾಂಗ್ರೆಸ್ ಪಕ್ಷ ಬಳಸುತ್ತಿದೆ ಎಂದು ದೂರಿದ್ದಾರೆ. 
"ನನಗೆ ಪೊಲೀಸ್ ತನಿಖೆಯಲ್ಲಿ ನಂಬಿಕೆಯಿಲ್ಲ. ಒಂದರ ನಂತರ ಒಂದು ಹಗರಣವನ್ನು ಹುಟ್ಟುಹಾಕುವ ಪ್ರಯತ್ನದಲ್ಲಿ ನಮ್ಮ ಪಕ್ಷದ ನಾಯಕರನ್ನು ಸುಳ್ಳು ಸುಳ್ಳೇ ಸಿಕ್ಕಿಸಿ ಬಂಧಿಸಲಾಗುತ್ತಿದೆ. ನಾವು ಈ ಸರ್ಕಾರವನ್ನಾಗಲಿ (ಪಶ್ಚಿಮ ಬಂಗಾಳ) ಅಥವಾ ಪೊಲೀಸರನ್ನಾಗಲಿ ನಂಬುವುದಿಲ್ಲ" ಎಂದು ಅವರು ಹೇಳಿದ್ದಾರೆ. 
"ಅವರು ಯಾವುದೇ ಎಲ್ಲೆಗೆ ಹೋಗಲಿ. ನಮಗೆ ಕೇಂದ್ರ ತನಿಖಾ ದಳ ಈ ಪ್ರಕರಣವನ್ನು ತನಿಖೆ ಮಾಡಬೇಕಿದೆ" ಎಂದಿರುವ ವಿಜಯವರ್ಗೀಯ ತಮ್ಮ ಪಕ್ಷದ ಯಾರಾದರೂ ಈ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT