ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿ 
ಪ್ರಧಾನ ಸುದ್ದಿ

ಬಜೆಟ್ ಮಂಡಿಸುವುದು ಸಾಂವಿಧಾನಿಕ ಅಗತ್ಯತೆ: ಜೇಟ್ಲಿ

ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣಾ ಮುಗಿಯುವವರೆಗೂ ಕೇಂದ್ರ ಹಣಕಾಸು ಬಜೆಟ್ ಮಂಡನೆ ಮುಂದೂಡುವುದಕ್ಕೆ ಕೆಲವು ರಾಜಕೀಯ ಪಕ್ಷಗಳು ಆಗ್ರಹಿಸಿರುವುದಕ್ಕೆ ಬುಧವಾರ ಪ್ರತಿಕ್ರಿಯಿಸಿರುವ

ನವದೆಹಲಿ: ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣಾ ಮುಗಿಯುವವರೆಗೂ ಕೇಂದ್ರ ಹಣಕಾಸು ಬಜೆಟ್ ಮಂಡನೆ ಮುಂದೂಡುವುದಕ್ಕೆ ಕೆಲವು ರಾಜಕೀಯ ಪಕ್ಷಗಳು ಆಗ್ರಹಿಸಿರುವುದಕ್ಕೆ ಬುಧವಾರ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿ ಬಜೆಟ್ ಮಂಡಿಸುವುದು ಸಾಂವಿಧಾನಿಕ ಅಗತ್ಯತೆ ಎಂದಿದ್ದಾರೆ. 
"ಬಜೆಟ್ ಮಂಡಿಸುವುದು ಸಾಂವಿಧಾನಿಕ ಅಗತ್ಯತೆ" ಎಂದು ಜೇಟ್ಲಿ ಹೇಳಿದ್ದಾರೆ. 
ವಿಧಾನಸಭಾ ಚುನಾವಣೆಗಳು ಮುಗಿಯುವವರೆಗೆ ಸಂಸತ್ತಿನಲ್ಲಿ ಬಜೆಟ್ ಮಂಡನೆಯನ್ನು ಮುಂದೂಡಬೇಕು ಎಂದು ಬುಧವಾರ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಆಗ್ರಹಿಸಿದ್ದರು. 
ಯಾರನ್ನು ಹೆಸರಿಸದ ಜೇಟ್ಲಿ "ನೋಟು ಹಿಂಪಡೆತ ನಿರ್ಧಾರದ ವಿರುದ್ಧ ಪ್ರತಿಭಟಿಸಿದ ಪಕ್ಷ ಕೂಡ ಇದೆ; ಅವರಿಗೆ ಬಜೆಟ್ ಮಂಡಿಸುವುದರ ಬಗ್ಗೆ ಚಿಂತೆಯೇಕೆ" ಎಂದು ಕೂಡ ಹೇಳಿದ್ದಾರೆ. 
೨೦೧೪ ರ ಲೋಕಸಭಾ ಚುನಾವಣೆಗೂ ಮುಂಚೆ ಮಧ್ಯಂತರ ಬಜೆಟ್ ಮಂಡಿಸಲಾಗಿತ್ತು ಮತ್ತು ಈ ಹಿಂದೆ ಕೂಡ ಚುನಾವಣೆಗಳಿಗೆ ಮೊದಲು ಬಜೆಟ್ ಗಳನ್ನು ಮಂಡಿಸಲಾಗಿದೆ ಎಂದು ಸಚಿವ ಹೇಳಿದ್ದಾರೆ. 
ಇದಕ್ಕೂ ಮುಂಚೆ ಪ್ರತಿಕ್ರಿಯಿಸಿದ್ದ ಮುಖ್ಯ ಚುನಾವಣಾ ಆಯುಕ್ತ ನಜೀಮ್ ಜೈದಿ, ವಿವಿಧ ಪಕ್ಷಗಳು ಬಜೆಟ್ ಮಂಡನೆ ಮುಂದೂಡುವುದಕ್ಕೆ ಮಾಡಿರುವ ಮನವಿಯನ್ನು ಪರಿಶೀಲಿಸಿ ಚರ್ಚಿಸಲಾಗುವುದು ಎಂದಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT