ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಗೋವಾ ವಿಧಾನಸಭಾ ಚುನಾವಣೆ: ಬಿಜೆಪಿ ಜೊತೆಗೆ ಮೈತ್ರಿ ಕಳಚಿಕೊಂಡ ಎಂಜಿಪಿ

ಗೋವಾದ ಭಾರತೀಯ ಜನತಾ ಪಕ್ಷದ ಮುಂದಾಳತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ ಗುರುವಾರ ಹಿಂತೆಗೆದುಕೊಂಡಿದೆ.

ಪಣಜಿ: ಗೋವಾದ ಭಾರತೀಯ ಜನತಾ ಪಕ್ಷದ ಮುಂದಾಳತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ ಗುರುವಾರ ಹಿಂತೆಗೆದುಕೊಂಡಿದೆ. 
ಮುಂದಿನ ವಿಧಾನಸಭಾ ಚುನಾವಣೆಗಳಲ್ಲಿ ಸುದಿನ್ ಧಾವಳಿಕರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ. 
ಎಂಜಿಪಿ ಈ ಘೋಷಣೆಯನ್ನು ಮಾಡಿ, ಬೆಂಬಲ ಹಿಂತೆಗೆದುಕೊಡಿರುವ ಪತ್ರವನ್ನು ಗೋವಾ ರಾಜ್ಯಪಾಲ ಮೃದುಲಾ ಸಿನ್ಹಾ ಅವರಿಗೆ ನೀಡಿದ್ದಾರೆ. 
"ಈಗ ಚುನಾವಣಾ ಆಯೋಗ ೨೦೧೭ರ ವಿಧಾನಸಭಾ ಚುನಾವಣಾ ಘೋಷಿಸಿರುವುದರಿಂದ, ಕೇಂದ್ರ ಸಮಿತಿ ಅಥವಾ ಎಂಜಿಪಿ, ಬಿಜೆಪಿ ಜೊತೆಗೆ ಸಖ್ಯ ಮುಂದುವರೆಸದೆ, ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಧೃಢೀಕರಿಸುತ್ತೇವೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ. 
ಐದು ರಾಜ್ಯಗಳ ೪೦೩ ವಿಧಾನಸಭಾ ಕ್ಷೇತ್ರಗಳಿಗೆ ೭ ಹಂತದ ಮತದಾನವನ್ನು ಚುನಾವಣಾ ಆಯೋಗ ಘೋಷಿಸಿತ್ತು. ಗೋವಾದಲ್ಲಿ ಫೆಬ್ರವರಿ ೪ ರಂದು ಚುನಾವಣಾ ನಡೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

SCROLL FOR NEXT