ಮುಲಾಯಂ ಸಿಂಗ್ ಯಾದವ್ 
ಪ್ರಧಾನ ಸುದ್ದಿ

'ಪಕ್ಷದಿಂದ ರಾಮ್ ಗೋಪಾಲ್ ಉಚ್ಚಾಟನೆ, ರಾಜ್ಯಸಭಾ ಸ್ಥಾನ ಬದಲಾವಣೆ'

ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಆಪ್ತ ರಾಮ್ ಗೋಪಾಲ್ ಯಾದವ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದ್ದು,...

ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಆಪ್ತ ರಾಮ್ ಗೋಪಾಲ್ ಯಾದವ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದ್ದು, ಅವರನ್ನು ಪಕ್ಷದ ರಾಜ್ಯಸಭಾ ನಾಯಕ ಸ್ಥಾನದಿಂದ ಬದಲಾವಣೆ ಮಾಡುವಂತೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಸೋಮವಾರ ರಾಜ್ಯಸಭಾ ಅಧ್ಯಕ್ಷ ಹಮಿದ್ ಅನ್ಸಾರಿ ಅವರಿಗೆ ಪತ್ರ ಬರೆದಿದ್ದಾರೆ.
ಪಕ್ಷದಿಂದ ಉಚ್ಚಾಟಿತರಾಗಿರುವ ರಾಮ್ ಗೋಪಾಲ್ ಯಾದವ್ ಅವರ ಸ್ಥಾನವನ್ನು ರಾಜ್ಯಸಭೆಯ ಮೊದಲ ಸಾಲಿನಿಂದ ಹಿಂದಿನ ಸ್ಥಾನಕ್ಕೆ ಸ್ಥಳಾಂತರಿಸುವಂತೆ ಮುಲಾಯಂ ಅನ್ಸಾರಿಗೆ ಮನವಿ ಮಾಡಿದ್ದಾರೆ. ರಾಮ್ ಗೋಪಾಲ್ ಅವರು ಇದುವರೆಗೆ ಮುಂದಿನ ಸಾಲಿನಲ್ಲಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರ ಪಕ್ಕದಲ್ಲಿ ಕುಳಿತುಕೊಳ್ಳುತ್ತಿದ್ದರು.
ರಾಮ್ ಗೋಪಾಲ್ ಯಾದವ್ ಅವರನ್ನು ಡಿಸೆಂಬರ್ 30, 2016ರಂದು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದ್ದು, ರಾಜ್ಯಸಭೆಯ ಸಮಾಜವಾದಿ ಪಕ್ಷದ ಸಂಸದೀಯ ನಾಯಕನ ಸ್ಥಾನ ಕಳೆದುಕೊಂಡಿದ್ದಾರೆ ಎಂದು ಮುಲಾಯಂ ತಿಳಿಸಿದ್ದಾರೆ. ಆದರೆ ಪಕ್ಷದ ಹೊಸ ಸಂಸದೀಯ ನಾಯಕನ ಬಗ್ಗೆ ಮುಲಾಯಂ ಯಾವುದೇ ಪ್ರಸ್ತಾಪ ಮಾಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT