ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಕೇಜ್ರಿವಾಲ್ ಮನೆಯೆದುರು ೧೨೦ ಬಿಜೆಪಿ ನಗರಸಭಾ ಸದಸ್ಯರ ಬಂಧನ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯೆದುರು ಪ್ರತಿಭಟನೆ ನಡೆಸುತ್ತಿದ್ದ ೧೨೦ ಬಿಜೆಪಿ ನಗರಸಭಾ ಸದಸ್ಯರನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯೆದುರು ಪ್ರತಿಭಟನೆ ನಡೆಸುತ್ತಿದ್ದ ೧೨೦ ಬಿಜೆಪಿ ನಗರಸಭಾ ಸದಸ್ಯರನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. 
ಪೌರಕಾರ್ಮಿಕರ ವೇತನಕ್ಕೆ ಹಣ ಬಿಡುಗಡೆ ಮಾಡಲು ಆಗ್ರಹಿಸಿ ಅವರು ಪ್ರತಿಭಟನೆ ನಡೆಸುತ್ತಿದ್ದರು. 
ಹಿರಿಯ ಬಿಜೆಪಿ ನಗರಸಭಾ ಸದಸ್ಯ ಸುಭಾಷ್ ಆರ್ಯ ನೇತೃತ್ವದಲ್ಲಿ ನಡೆಯಿತ್ತಿದ್ದ ಈ ಧರಣಿಯಲ್ಲಿ, ನಾಲ್ಕನೇ ದೆಹಲಿ ವಿತ್ತ ಆಯೋಗ (ಎಫ್ ಡಿ ಎಫ್ ಸಿ) ನಿಯಮದಂತೆ ನಗರಸಭಾ ದೇಣಿಗೆಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗಿದೆ. 
ಧರಣಿ ನಿರತರನ್ನು ಒತ್ತಾಯಪೂರ್ವಕವಾಗಿ ವಶಪಡಿಸಿಕೊಂಡ ಪೊಲೀಸರು, ಸಿವಿಲ್ ಲೈನ್ಸ್ ಮತ್ತು ಮಾರಿಸ್ ನಗರ ಪೊಲೀಸ್ ಠಾಣೆಗಳಿಗೆ ಕರೆತಂದಿದ್ದಾರೆ. 
ಪೂರ್ವ ದೆಹಲಿ ನಗರ ಸಭಾ (ಇ ಡಿ ಎಂ ಸಿ) ಪೌರಕಾರ್ಮಿಕರು ಕಳೆದ ಕೆಲವು ತಿಂಗಳುಗಳಿಂದ ವೇತನ ಪಡೆಯದೆ ಒಂದು ವಾರ ಪ್ರತಿಭಟನೆ ನಡೆಸಿರುವುದರ ಪರಿಣಾಮವಾಗಿ ಆ ಪ್ರದೇಶಗಳಲ್ಲಿ ಕಸ ತುಂಬಿತುಳುಕುತ್ತಿದೆ. 
ಜನವರಿ ೯ ರಂದು  ಇ ಡಿ ಎಂ ಸಿ ಮುಖ್ಯ ಕಚೇರಿಯ ಎದುರು ಧರಣಿ ನಡೆಸಿದ್ದ ಪೌರಕಾರ್ಮಿಕರು, ಕೇಜ್ರಿವಾಲ್ ಅವರ ಪ್ರತಿಕೃತಿಯನ್ನು ಕೂಡ ದಹಿಸಿದ್ದರು.
ಹಿಂದಿನ ಎಲ್ಲ ಸರ್ಕಾರಗಳಿಗಿಂತಲೂ ಹೆಚ್ಚು ಹಣ ಬಿಡುಗಡೆ ಮಾಡಿರುವುದಾಗಿ ತಿಳಿಸಿರುವ ದೆಹಲಿ ಸರ್ಕಾರ, ಬಿಜೆಪಿ ಆಡಳಿತದ ನಗರಸಭೆ ಭಾರಿ ಅವ್ಯವಹಾರ ನಡೆಸಿದೆ ಎಂದು ಪ್ರತ್ಯಾರೋಪ ಮಾಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT