ಆರ್ ಜೆ ಡಿ ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ 
ಪ್ರಧಾನ ಸುದ್ದಿ

ಮುಲಾಯಂ ಅಖಿಲೇಶ್ ಗೆ ಆಶೀರ್ವದಿಸಬೇಕು: ಲಾಲು

ಸಮಾಜವಾದಿ ಪಕ್ಷ ಹೆಸರು ಮತ್ತು ಚಿಹ್ನೆಯನ್ನು ಉಳಿಸಿಕೊಳ್ಳಲು ಸಫಲರಾಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಅಭಿನಂದಿಸಿರುವ ಆರ್ ಜೆ ಡಿ ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್

ಪಾಟ್ನಾ: ಸಮಾಜವಾದಿ ಪಕ್ಷ ಹೆಸರು ಮತ್ತು ಚಿಹ್ನೆಯನ್ನು ಉಳಿಸಿಕೊಳ್ಳಲು ಸಫಲರಾಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಅಭಿನಂದಿಸಿರುವ ಆರ್ ಜೆ ಡಿ ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್, ಸಮಾಜ ವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ತಮ್ಮ ಪುತ್ರನನ್ನು ಆಶೀರ್ವದಿಸಿ, ಮತ್ತೆ ಒಂದಾಗಬೇಕು ಎಂದು ಸೋಮವಾರ ಸಲಹೆ ನೀಡಿದ್ದಾರೆ. 
"ನೇತಾಜಿಯವರು (ಮುಲಾಯಂ ಸಿಂಗ್ ಯಾದವ್) ಸಮಯಹರಣ ಮಾಡದೆ ಅಖಿಲೇಶ್ ಅವರಿಗೆ ಆಶೀರ್ವದಿಸಬೇಕೆಂದು ನಾನು ಕೋರುತ್ತೇನೆ" ಎಂದು ಲಾಲು ಪ್ರಸಾದ್ ಮಾಧ್ಯಮಗಳಿಗೆ ಹೇಳಿದ್ದಾರೆ. 
ಕಿತ್ತಾಡದಂತೆ ಮುಲಾಯಂ ಮತ್ತು ಅಖಿಲೇಶ್ ಅವರಿಗೆ ಸಲಹೆ ನೀಡಿರುವ ಲಾಲು 'ಕೋಮುವಾದಿ  ಶಕ್ತಿಗಳಿಗೆ' ಕಡಿವಾಣ ಹಾಕಲು ಇಬ್ಬರು ಒಗ್ಗಟ್ಟಾಗಿರುವುದು ಮುಖ್ಯ ಎಂದಿದ್ದಾರೆ. 
"ಸಮಾಜವಾದಿ ಪಕ್ಷದ ಒಡಕಿನಿಂದ ಕೋಮುವಾದಿ ಶಕ್ತಿಗಳಿಗೆ ಅನುಕೂಲವಾಗುತ್ತಿದೆ.. ನರೇಂದ್ರ ಮೋದಿ ಅಧಿಕಾರಕ್ಕೆ (ಉತ್ತರಪ್ರದೇಶದಲ್ಲಿ) ಬಂದರೆ ಈ ದೇಶವನ್ನು ಉಳಿಸುವುದು ಸಾಧ್ಯವಿಲ್ಲ" ಎಂದು ಕೂಡ ಅವರು ಹೇಳಿದ್ದಾರೆ. 
ಅಖಿಲೇಶ್ ಅವರ ಯಶೋಗಾಥೆ ತಂದೆ ಮುಲಾಯಂ ಸಿಂಗ್ ಅವರ ಗೆಲುವೇ ಎಂದು ಕೂಡ ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಬಣ್ಣಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT