ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ 
ಪ್ರಧಾನ ಸುದ್ದಿ

ನೋಟು ಹಿಂಪಡೆತ ಭಾರತೀಯ ಆರ್ಥಿಕತೆಗೆ ಹಿರೋಶಿಮಾ ದುರಂತದಂತೆ: ಶಿವಸೇನೆ

ಕೇಂದ್ರ ಸರ್ಕಾರದ ನೋಟು ಹಿಂಪಡೆತ ನಿರ್ಧಾರವನ್ನು ಬುಧವಾರ ಮತ್ತೆ ಕಟುವಾಗಿ ಟೀಕಿಸಿರುವ ಬಿಜೆಪಿ ಪಕ್ಷದ ಮಿತ್ರ ಶಿವಸೇನೆ, ಈ ನಿರ್ಧಾರದಿಂದ ಭಾರತೀಯ ಆರ್ಥಿಕತೆಗೆ ಉಂಟಾಗಿರುವ

ಮುಂಬೈ: ಕೇಂದ್ರ ಸರ್ಕಾರದ ನೋಟು ಹಿಂಪಡೆತ ನಿರ್ಧಾರವನ್ನು ಬುಧವಾರ ಮತ್ತೆ ಕಟುವಾಗಿ ಟೀಕಿಸಿರುವ ಬಿಜೆಪಿ ಪಕ್ಷದ ಮಿತ್ರ ಶಿವಸೇನೆ, ಈ ನಿರ್ಧಾರದಿಂದ ಭಾರತೀಯ ಆರ್ಥಿಕತೆಗೆ ಉಂಟಾಗಿರುವ ಹೊಡೆತವನ್ನು ಹಿರೋಶಿಮಾ-ನಾಗಾಸಾಕಿಯ ಮೇಲೆ ನಡೆದ ಬಾಂಬ್ ದಾಳಿಗೆ ಹೋಲಿಸಿದೆ.   
"'ನೋಟು ಹಿಂಪಡೆತ ಬಾಂಬ್ ದಾಳಿ' ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಆರ್ಥಿಕತೆಯನ್ನು ಹಿರೋಶಿಮಾ ಮತ್ತು ನಾಗಾಸಾಕಿಯನ್ನಾಗಿಸಿದ್ದಾರೆ. ಎಲ್ಲರೂ ಸತ್ತಿದ್ದಾರೆ" ಎಂದು ಶಿವಸೇನೆ ಪಕ್ಷ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆದುಕೊಂಡಿದೆ. 
ಮೋದಿ ಯಾರ ಮಾತನ್ನು ಕೇಳುವುದಿಲ್ಲ ಎಂದು ಆರೋಪಿಸಿರುವ ಶಿವಸೇನೆ, ಕಳೆದ ವರ್ಷ ನವೆಂಬರ್ ೮ ರಂದು ೫೦೦ ಮತ್ತು ೧೦೦೦ ರೂ ನೋಟುಗಳನ್ನು ಹಿಂಪಡೆಯುವಾಗ ಆರ್ ಬಿ ಐ ಸಲಹೆಯನ್ನು ಕೂಡ ಪ್ರಧಾನಿ ಕೇಳಿಲ್ಲ ಎಂದು ಕೂಡ ಆರೋಪಿಸಿದೆ. 
"ಅವರ ಸಂಪುಟದಲ್ಲಿ ಕುಳಿತಿರುವ ಕಿವುಡ ಮತ್ತು ಮೂಗ ಗಿಣಿಗಳಂತೆ, ಅವರನ್ನು (ಊರ್ಜಿತ್ ಪಟೇಲ್) ಆರ್ ಬಿ ಐ ಗವರ್ನರ್ ಆಗಿ ನೇಮಿಸಲಾಯಿತು ಮತ್ತು ಈಗ ದೇಶದ ಆರ್ಥಿಕತೆ ಛಿದ್ರಗೊಂಡಿದೆ" ಎಂದು ಕೂಡ ಸೇನಾ ಹೇಳಿದೆ. 
ಉದ್ಧವ್ ಠಾಕ್ರೆ ಮುಂದಾಳತ್ವದ ಶಿವಸೇನೆ ಕೇಂದ್ರ ಮತ್ತು ಮಹಾರಾಷ್ಟ್ರದಲ್ಲಿ ಆಡಳಿತ ಬಿಜೆಪಿ ಪಕ್ಷದ ಮಿತ್ರ ಪಕ್ಷ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT