ಸಂಸತ್ ಭವನ 
ಪ್ರಧಾನ ಸುದ್ದಿ

ಫೆ.1ರಂದೇ ಸಾಮಾನ್ಯ ಬಜೆಟ್ ಮಂಡನೆ, ಚುನಾವಣೆಯಿರುವ 5 ರಾಜ್ಯಗಳಿಗೆ ಯಾವುದೇ ಘೋಷಣೆ ಇಲ್ಲ

ಪ್ರತಿಪಕ್ಷಗಳ ವಿರೋಧವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಸರ್ಕಾರ, ಫೆಬ್ರವರಿ 1ರಂದೇ 2017-18ನೇ ಸಾಲಿನ ಸಾಮಾನ್ಯ ಬಜೆಟ್ ಮಂಡಿಸುತ್ತೇವೆ....

ನವದೆಹಲಿ: ಪ್ರತಿಪಕ್ಷಗಳ ವಿರೋಧವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಸರ್ಕಾರ, ಫೆಬ್ರವರಿ 1ರಂದೇ 2017-18ನೇ ಸಾಲಿನ ಸಾಮಾನ್ಯ ಬಜೆಟ್ ಮಂಡಿಸುತ್ತೇವೆ. ಆದರೆ ಚುನಾವಣೆ ಇರುವ ಐದು ರಾಜ್ಯಗಳಿಗೆ ಬಜೆಟ್ ನಲ್ಲಿ ಯಾವುದೇ ಯೋಜನೆಗಳನ್ನು ಘೋಷಿಸುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಬುಧವಾರ ಸ್ಪಷ್ಟಪಡಿಸಿದೆ.
ಒಂದು ತಿಂಗಳು ಮುಂಚಿತವಾಗಿಯೇ ಬಜೆಟ್ ಮಂಡಿಸುವ ತನ್ನ ನಿರ್ಧಾರವನ್ನು ಆಯೋಗದ ಮುಂದೆ ಸಮರ್ಥಿಸಿಕೊಂಡಿರುವ ಸರ್ಕಾರ, ಏಪ್ರಿಲ್ 1ರಂದು ಹಣಕಾಸು ವರ್ಷದ ಮೊದಲ ದಿನದಿಂದಲೇ ಹೂಡಿಕೆಯ ಪ್ರಕ್ರಿಯೆ ಆರಂಭವಾಗಲಿ ಎಂಬ ಉದ್ದೇಶದಿಂದ ಫೆ.1ರಂದು ಬಜೆಟ್ ಮಂಡಿಸಲಾಗುತ್ತಿದೆ. ಆದರೆ ಈ ವೇಳೆ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಐದು ರಾಜ್ಯಗಳಿಗೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಯಾವುದೇ ನಿರ್ದಿಷ್ಟ ಯೋಜನೆಗಳನ್ನು ಪ್ರಕಟಿಸುವುದಿಲ್ಲ ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ,
ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಸನ್ನಿಹಿತವಾಗಿರುವುದರಿಂದ ಕೇಂದ್ರ ಸರ್ಕಾರ ಅದಕ್ಕೆ ಮುನ್ನ ಜನಪ್ರಿಯ ಬಜೆಟ್‌ ಮಂಡಿಸಿ ರಾಜಕೀಯ ಲಾಭ ಪಡೆಯುವ ಸಾಧ್ಯತೆ ಇರುವುದರಿಂದ ಚುನಾವಣೆಯ ಬಳಿಕವೇ ಬಜೆಟ್‌ ಮಂಡಿಸುವಂತೆ ಕಾಂಗ್ರೇಸ್ ಸೇರಿದಂತೆ ಹಲವು ಪ್ರತಿಪಕ್ಷಗಳು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದವು.
ಐದು ರಾಜ್ಯಗಳೆಂದರೆ ಇಡೀ ದೇಶವಲ್ಲ; ಆದುದರಿಂದ ಕೇವಲ ಮೂರ್ಖರು ಮಾತ್ರವೇ ಬಜೆಟ್‌ ಮಂಡನೆಯನ್ನು ಮುಂದಕ್ಕೆ ಹಾಕಬೇಕೆಂದು ಹೇಳುತ್ತಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಪ್ರತಿಪಕ್ಷಗಳನ್ನು ಲೇವಡಿ ಮಾಡಿದ್ದರು. 
ಸಾಮಾನ್ಯವಾಗಿ ಪೆ.28ರಂದು ಕೇಂದ್ರ ಬಜೆಟ್‌ ಮಂಡಿಸುವುದು ವಾಡಿಕೆ; ಆದರೆ ಈ ಬಾರಿ ಅದನ್ನು ಫೆ.1ರಂದೇ ಮಂಡಿಸಲು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಮುಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT