ಅಮರಾವತಿ: ಆಂಧ್ರ ಪ್ರದೇಶದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ರೈಲು ಹಳಿ ತಪ್ಪಿದ ಪರಿಣಾಮ ಸುಮಾರು 23 ಪ್ರಯಾಣಿಕರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಗದಲ್ ಪುರ-ಭುವನೇಶ್ವರ ನಡುವೆ ಸಂಚರಿಸುತ್ತಿದ್ದ ರೈಲು ಹಿರಾಖಂಡ್ ಎಕ್ಸೆಪ್ರೆಸ್ ರೈಲು ಆಂಧ್ರಪ್ರದೇಶದ ರಾಯಘಡ ಸಮೀಪ ಕೂನೇರು ನಿಲ್ದಾಣದ ಬಳಿ ಹಳಿ ತಪ್ಪಿದೆ. ಜಗದಲ್ ಪುರ-ಭುವನೇಶ್ವರ ನಡುವೆ ಸಂಚರಿಸುತ್ತಿದ್ದ ರೈಲು ಹಿರಾಖಂಡ್ ಎಕ್ಸೆಪ್ರೆಸ್ ರೈಲು ನಿನ್ನೆ ರಾತ್ರಿ 11 ಗಂಟೆ ಸುಮಾರಿನಲ್ಲಿ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಕೂನೇರು ರೈಲು ನಿಲ್ದಾಣದ ಸಮೀಪ ಹಳಿ ತಪ್ಪಿತ್ತು. ರೈಲಿನ ಎಂಜಿನ್ ಸೇರಿದಂತೆ 9 ಬೋಗಿಗಳು ಹಳಿ ತಪ್ಪಿದ ಪರಿಣಾಮ ರೈಲಿನಲ್ಲಿದ್ದ ಸುಮಾರು 23 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಂತೆಯೇ ಸುಮಾರು 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಸೇರಿದಂತೆ ಅಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜಖಂಗೊಂಡಿರುವ ಬೋಗಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಹೊರತರಲು ಹರಸಾಹಸ ಪಡಲಾಗುತ್ತಿದೆ.