ಪ್ರಧಾನಿ ಮೋದಿ 
ಪ್ರಧಾನ ಸುದ್ದಿ

ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ದುರಂತಕ್ಕೆ ಪ್ರಧಾನಿ ಮೋದಿ ವಿಷಾದ!

ಹಿರಾಖಂಡ್ ಎಕ್ಸೆ ಪ್ರೆಸ್ ರೈಲು ದುರಂತ ಸಂಬಂಧ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ದುರಂತ ವಿಷಾದನೀಯ ಎಂದು ಹೇಳಿದ್ದಾರೆ.

ನವದೆಹಲಿ: ಹಿರಾಖಂಡ್ ಎಕ್ಸೆ ಪ್ರೆಸ್ ರೈಲು ದುರಂತ ಸಂಬಂಧ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ದುರಂತ ವಿಷಾದನೀಯ ಎಂದು ಹೇಳಿದ್ದಾರೆ.

ದುರಂತ ಸಂಬಂಧ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರೈಲು ಹಳಿ ತಪ್ಪಿದ್ದರಿಂದ ದುರಂತ ಸಂಭವಿಸಿದೆ. ದುರಂತ ನಿಜಕ್ಕೂ ನೋವು ತಂದಿದೆ. ದುರಂತದಲ್ಲಿ ಗಾಯಗೊಂಡ ಪ್ರಯಾಣಿಕರು  ಶೀಘ್ರ ಚೇತರಿಕೆ ಕಾಣುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ರೈಲ್ವೇ ಇಲಾಖೆ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಯಲ್ಲಿ ತೊಡಗಿದ್ದು, ಪ್ರಯಾಣಿಕರ ರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಜಗದಲ್ ಪುರ-ಭುವನೇಶ್ವರ ನಡುವೆ ಸಂಚರಿಸುತ್ತಿದ್ದ ರೈಲು ಹಿರಾಖಂಡ್ ಎಕ್ಸೆಪ್ರೆಸ್ ರೈಲು ಆಂಧ್ರಪ್ರದೇಶದ ರಾಯಘಡ ಸಮೀಪ ಕೂನೇರು ನಿಲ್ದಾಣದ ಬಳಿ ಹಳಿ ತಪ್ಪಿದೆ. ಜಗದಲ್ ಪುರ-ಭುವನೇಶ್ವರ ನಡುವೆ ಸಂಚರಿಸುತ್ತಿದ್ದ  ರೈಲು ಹಿರಾಖಂಡ್ ಎಕ್ಸೆಪ್ರೆಸ್ ರೈಲು ನಿನ್ನೆ ರಾತ್ರಿ 11 ಗಂಟೆ ಸುಮಾರಿನಲ್ಲಿ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಕೂನೇರು ರೈಲು ನಿಲ್ದಾಣದ ಸಮೀಪ ಹಳಿ ತಪ್ಪಿತ್ತು. ರೈಲಿನ ಎಂಜಿನ್ ಸೇರಿದಂತೆ 9 ಬೋಗಿಗಳು ಹಳಿ ತಪ್ಪಿದ  ಪರಿಣಾಮ ರೈಲಿನಲ್ಲಿದ್ದ ಸುಮಾರು 23 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಂತೆಯೇ ಸುಮಾರು 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT