ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ರಾಜ್ಯದ ಬುಡಕಟ್ಟು ವಿದ್ಯಾರ್ಥಿಗಳಿಗೆ ಫೆಬ್ರವರಿ 1ರಿಂದ ನೌಕರಿ ಪಡೆಯುವವರೆಗೆ ಶಿಷ್ಯವೇತನ

ಬುಡಕಟ್ಟು ಜನಾಂಗಕ್ಕೆ ಸೇರಿದ ಕೊರಗ ಮತ್ತು ಜೇನು ಕುರುಬ ಸಮುದಾಯದ ವಿದ್ಯಾರ್ಥಿಗಳಿಗೆ ಫೆಬ್ರವರಿಯಿಂದ ಅವರು...

ಬೆಂಗಳೂರು: ಬುಡಕಟ್ಟು ಜನಾಂಗಕ್ಕೆ ಸೇರಿದ ಕೊರಗ ಮತ್ತು ಜೇನು ಕುರುಬ ಸಮುದಾಯದ ವಿದ್ಯಾರ್ಥಿಗಳಿಗೆ ಫೆಬ್ರವರಿಯಿಂದ ಅವರು ನೌಕರಿ ಪಡೆಯುವವರೆಗೆ ಶಿಷ್ಯ ವೇತನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೊರಗ ಮತ್ತು ಜೇನು ಕುರುಬ ಎರಡೂ ಸಮುದಾಯದ ಜನಸಂಖ್ಯೆ ಕ್ಷಿಣಿಸುತ್ತಿದ್ದು, ಈ ಸಮುದಾಯದಲ್ಲಿ ಶಿಕ್ಷಣ ಪಡೆಯುತ್ತಿರುವ ಸಂಖ್ಯೆಯೂ ತೀರಾ ಕಡಿಮೆಯಾಗುತ್ತಿದೆ. ಹೀಗಾಗಿ ಅವರಿಗೆ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ ಮುಂದಿನ ತಿಂಗಳಿಂದ ಶಿಷ್ಯ ವೇತನ ನೀಡಲು ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಹೇಳಿದ್ದಾರೆ.
ಎಸ್ಎಸ್ಎಲ್ ಸಿ ಯ ನಂತರ ಕಾಲೇಜ್ ಶಿಕ್ಷಣಕ್ಕೆ ಸೇರಿಕೊಳ್ಳುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 2 ಸಾವಿರ ರುಪಾಯಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ 2,500 ರುಪಾಯಿ ಶಿಷ್ಯ ವೇತನ ಪಡೆಯಲಿದ್ದಾರೆ. ಇನ್ನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ 3.500 ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳು ತಿಂಗಳಿಗೆ 4,500 ರುಪಾಯಿ ಪಡೆಯಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಇದೇ ವೇಳೆ ಗೌಡ್ಲು ಮತ್ತು ಹಸಲೂರು ಬಡುಕಟ್ಟು ಸಮುದಾಯಕ್ಕೆ ಸೇರಿದ ಜನಕ್ಕೆ ಉಚಿತವಾಗಿ ರೇಷನ್ ನೀಡಲಾಗುತ್ತಿದ್ದು, ಈ ಎರಡು ಯೋಜನೆಗಳು ಫೆಬ್ರವರಿ 1ರಿಂದ ಜಾರಿಗೆ ಬರಲಿವೆ ಎಂದು ಆಂಜನೇಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT