ಸಲ್ಮಾನ್ ಖಾನ್ 
ಪ್ರಧಾನ ಸುದ್ದಿ

ಕೃಷ್ಣಮೃಗ ಬೇಟೆ ಪ್ರಕರಣ; ಸಲ್ಮಾನ್, ಸಹ ಆರೋಪಿಗಳಿಗೆ ಕೋರ್ಟ್ ಹಾಜರಾತಿಯಿಂದ ವಿನಾಯಿತಿ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ, ಸಲ್ಮಾನ್ ಖಾನ್ ಮತ್ತು ಇತರ ಸಹ ಆರೋಪಿಗಳಿಗೆ ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಿರುವ ಜೋದ್ಪುರ ಕೋರ್ಟ್, ಪ್ರಕರಣವನ್ನು

ಜೋದ್ಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ, ಸಲ್ಮಾನ್ ಖಾನ್ ಮತ್ತು ಇತರ ಸಹ ಆರೋಪಿಗಳಿಗೆ ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಿರುವ ಜೋದ್ಪುರ ಕೋರ್ಟ್, ಪ್ರಕರಣವನ್ನು ಜನವರಿ ೨೭ ಕ್ಕೆ ಮುಂದೂಡಿದೆ. 
೧೯೯೮ ರಲ್ಲಿ ಕಂಕಣಿ ಗ್ರಾಮದಲ್ಲಿ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣದಲ್ಲಿ ಹೇಳಿಕೆಗಳನ್ನು ದಾಖಲು ಮಾಡಲು ಮುಖ್ಯ ಆರೋಪಿ ಸಲ್ಮಾನ್ ಖಾನ್ ಮತ್ತು ಸಹ ಆರೋಪಿಗಳಾದ ಸೈಫ್ ಅಲಿ ಖಾನ್, ಟಬು, ನೀಲಂ ಮತ್ತು ಸೋನಾಲಿ ಬೇಂದ್ರೆ ಅವರಿಗೆ ಮುಖ್ಯ ಜುಡಿಷಿಯಲ್ ಮೆಜೆಸ್ಟ್ರೇಟ್ ದಲ್ಪತ್ ರಾಜಪುರೋಹಿತ್ ಸಿಂಗ್ ಈ ಹಿಂದೆ ಆದೇಶಿಸಿದ್ದರು. 
"ಆರೋಪಿಗಳು ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಾಗುವುದರಿಂದ ವಿನಾಯಿತಿ ಕೋರಿ ನಾವು ಜಂಟಿ ಅರ್ಜಿಯನ್ನು ಹಾಕಿದ್ದೆವು ಮತ್ತು ನ್ಯಾಯಾಲಯ ಒಪ್ಪಿಕೊಂಡಿತು" ಎಂದು ವಕೀಲ ಕೆ ಕೆ ವ್ಯಾಸ್ ಹೇಳಿದ್ದಾರೆ. 
ಗಣರಾಜ್ಯೋತ್ಸ ದಿನಾಚರಣೆಗಳಿಗಾಗಿ ಮುಖ್ಯಮಂತ್ರಿ ಮತ್ತು ಗವರ್ನರ್ ನಗರಕ್ಕೆ ಆಗಮಿಸುತ್ತಿರುವುದರಿಂದ ನಟರಿಗೆ ಸಮರ್ಥ ಭದ್ರತೆ ನೀಡಲು ಸಾಧ್ಯವಾಗದ ಪರಿಸ್ಥಿತಿಯನ್ನು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT