ಸಲ್ಮಾನ್ ಖಾನ್ 
ಪ್ರಧಾನ ಸುದ್ದಿ

ಕೃಷ್ಣಮೃಗ ಬೇಟೆ ಪ್ರಕರಣ; ಸಲ್ಮಾನ್, ಸಹ ಆರೋಪಿಗಳಿಗೆ ಕೋರ್ಟ್ ಹಾಜರಾತಿಯಿಂದ ವಿನಾಯಿತಿ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ, ಸಲ್ಮಾನ್ ಖಾನ್ ಮತ್ತು ಇತರ ಸಹ ಆರೋಪಿಗಳಿಗೆ ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಿರುವ ಜೋದ್ಪುರ ಕೋರ್ಟ್, ಪ್ರಕರಣವನ್ನು

ಜೋದ್ಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ, ಸಲ್ಮಾನ್ ಖಾನ್ ಮತ್ತು ಇತರ ಸಹ ಆರೋಪಿಗಳಿಗೆ ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಿರುವ ಜೋದ್ಪುರ ಕೋರ್ಟ್, ಪ್ರಕರಣವನ್ನು ಜನವರಿ ೨೭ ಕ್ಕೆ ಮುಂದೂಡಿದೆ. 
೧೯೯೮ ರಲ್ಲಿ ಕಂಕಣಿ ಗ್ರಾಮದಲ್ಲಿ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣದಲ್ಲಿ ಹೇಳಿಕೆಗಳನ್ನು ದಾಖಲು ಮಾಡಲು ಮುಖ್ಯ ಆರೋಪಿ ಸಲ್ಮಾನ್ ಖಾನ್ ಮತ್ತು ಸಹ ಆರೋಪಿಗಳಾದ ಸೈಫ್ ಅಲಿ ಖಾನ್, ಟಬು, ನೀಲಂ ಮತ್ತು ಸೋನಾಲಿ ಬೇಂದ್ರೆ ಅವರಿಗೆ ಮುಖ್ಯ ಜುಡಿಷಿಯಲ್ ಮೆಜೆಸ್ಟ್ರೇಟ್ ದಲ್ಪತ್ ರಾಜಪುರೋಹಿತ್ ಸಿಂಗ್ ಈ ಹಿಂದೆ ಆದೇಶಿಸಿದ್ದರು. 
"ಆರೋಪಿಗಳು ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಾಗುವುದರಿಂದ ವಿನಾಯಿತಿ ಕೋರಿ ನಾವು ಜಂಟಿ ಅರ್ಜಿಯನ್ನು ಹಾಕಿದ್ದೆವು ಮತ್ತು ನ್ಯಾಯಾಲಯ ಒಪ್ಪಿಕೊಂಡಿತು" ಎಂದು ವಕೀಲ ಕೆ ಕೆ ವ್ಯಾಸ್ ಹೇಳಿದ್ದಾರೆ. 
ಗಣರಾಜ್ಯೋತ್ಸ ದಿನಾಚರಣೆಗಳಿಗಾಗಿ ಮುಖ್ಯಮಂತ್ರಿ ಮತ್ತು ಗವರ್ನರ್ ನಗರಕ್ಕೆ ಆಗಮಿಸುತ್ತಿರುವುದರಿಂದ ನಟರಿಗೆ ಸಮರ್ಥ ಭದ್ರತೆ ನೀಡಲು ಸಾಧ್ಯವಾಗದ ಪರಿಸ್ಥಿತಿಯನ್ನು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT