ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ 
ಪ್ರಧಾನ ಸುದ್ದಿ

ಅರ್ಣಬ್ ಸುದ್ದಿ ವಾಹಿನಿಗೆ 'ರಿಪಬ್ಲಿಕ್' ಹೆಸರು ಬಳಸುವಂತಿಲ್ಲ: ಸುಬ್ರಮಣ್ಯನ್ ಸ್ವಾಮಿ

ಟಿವಿ ಪತ್ರಕರ್ತ ಅರ್ಣಬ್ ಗೋಸ್ವಾಮಿ ಪ್ರಾರಂಭಿಸಲಿರುವ 'ರಿಪಬ್ಲಿಕ್' ಸುದ್ದಿ ವಾಹಿನಿಯ ಹೆಸರಿನ ಬಗ್ಗೆ ಆಕ್ಷೇಪ ಎತ್ತಿರುವ ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ಖಾಸಗಿ ಸಂಸ್ಥೆಯ ಹೆಸರಿಗೆ ಈ ಪದ ಬಳಸುವುದು

ನವದೆಹಲಿ: ಟಿವಿ ಪತ್ರಕರ್ತ ಅರ್ಣಬ್ ಗೋಸ್ವಾಮಿ ಪ್ರಾರಂಭಿಸಲಿರುವ 'ರಿಪಬ್ಲಿಕ್' ಸುದ್ದಿ ವಾಹಿನಿಯ ಹೆಸರಿನ ಬಗ್ಗೆ ಆಕ್ಷೇಪ ಎತ್ತಿರುವ ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ಖಾಸಗಿ ಸಂಸ್ಥೆಯ ಹೆಸರಿಗೆ ಈ ಪದ ಬಳಸುವುದು ಕಾನೂನು ಬಾಹಿರ ಎಂದಿದ್ದಾರೆ. 
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯಕ್ಕೆ ಪತ್ರ ಬರೆದಿರುವ ಸ್ವಾಮಿ, 'ರಿಪಬ್ಲಿಕ್' ಹೆಸರಿನಲ್ಲಿ ಪ್ರಾರಂಭಿಸಬೇಕೆಂದಿರುವ ಸುದ್ದಿವಾಹಿನಿಗೆ ಪರವಾನಗಿ ನೀಡುವುದು ಲಾಂಛನ ಮತ್ತು ಹೆಸರುಗಳ (ದುರ್ಬಳಕೆ ನಿಷೇಧ) ಕಾಯ್ದೆ ೧೯೫೦ನ್ನು ನೇರವಾಗಿ ಉಲ್ಲಂಘಿಸಿದಂತೆ ಮತ್ತು ಕಾನೂನಿಗೆ ವಿರುದ್ಧ ಎಂದಿದ್ದಾರೆ. 
"ಈ ಕಾಯ್ದೆಯ ಪ್ರಕಾರ ಕೆಲವು ಲಾಂಛನಗಳನ್ನು ಮತ್ತು ಹೆಸರುಗಳನ್ನು ವೃತ್ತಿಗಾಗಿ ಅಥವಾ ವಾಣಿಜ್ಯ ಸಂಸ್ಥೆಗಳಿಗೆ ಬಳಕೆ ಮಾಡುವುದು ನಿಷಿದ್ಧ ಎಂದು ಗಮನಿಸಬಹುದು. 'ರಿಪಬ್ಲಿಕ್' ಪದವನ್ನು ಬಳಸುವಂತಿಲ್ಲ" ಎಂದು ಅವರು ಬರೆದಿರುವ ಪತ್ರವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. 
ಸಚಿವಾಲಯ ಈ ಬಗ್ಗೆ ಗಮನ ಹರಿಸಬೇಕು ಎಂದು ಕೂಡ ಸ್ವಾಮಿ ಆಗ್ರಹಿಸಿದ್ದಾರೆ. 
ಈ ವಿವಾದದ ಬಗ್ಗೆ ಕಾರ್ಯದರ್ಶಿ ಹಂತದ ಅಧಿಕಾರಿ ಪರಿಶೀಲಿಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 
ಈ ಹಿಂದೆ ಟೈಮ್ಸ್ ನೌ ಸುದ್ದಿ ವಾಹಿನಿಯ ಸಂಪಾದಕ ಮುಖ್ಯಸ್ಥರಾಗಿದ್ದ ಅರ್ಣಬ್, ಡಿಸೆಂಬರ್ ೨೦೧೬ ರಲ್ಲಿ ಹೊಸ ಸುದ್ದಿವಾಹಿನಿ 'ರಿಪಬ್ಲಿಕ್' ಸ್ಥಾಪಿಸುತ್ತಿರುವುದಾಗಿ ಘೋಷಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT