ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮಾಚರಣೆಗೆ ಆಗಮಿಸಿದ ಪ್ರಧಾನಿ ಮೋದಿ 
ಪ್ರಧಾನ ಸುದ್ದಿ

ಉಗ್ರ ದಾಳಿ ಆತಂಕದ ನಡುವೆಯೇ 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಆರಂಭ!

ರಾಷ್ಟ್ರರಾಜಧಾನಿ ದೆಹಲಿಯಲ್ಲಿ 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಚಾಲನೆ ನೀಡಲಾಗಿದ್ದು, ಉಗ್ರ ದಾಳಿ ಆತಂಕದ ನಡುವೆಯೇ ಸಂಭ್ರಮಾಚರಣೆಯ ಕೇಂದ್ರ ಬಿಂದು ಪರೇಡ್ ಮತ್ತು ಸ್ಛಬ್ದ ಚಿತ್ರ ಮೆರಣಿಗೆಗೆ ಚಾಲನೆ ನೀಡಲಾಗಿದೆ.

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಚಾಲನೆ ನೀಡಲಾಗಿದ್ದು, ಉಗ್ರ ದಾಳಿ ಆತಂಕದ ನಡುವೆಯೇ ಸಂಭ್ರಮಾಚರಣೆಯ ಕೇಂದ್ರ ಬಿಂದು ಪರೇಡ್ ಮತ್ತು ಸ್ಛಬ್ದ ಚಿತ್ರ ಮೆರಣಿಗೆಗೆ ಚಾಲನೆ ನೀಡಲಾಗಿದೆ.

ಮೆರಣಿಗೆಯಲ್ಲಿ ಸೇನೆಯ ಶಕ್ತಿ ಪ್ರದರ್ಶನ ಮಾಡಲಾಗುತ್ತಿದ್ದು, ಭಾರತೀಯ ಸೇನೆಯ ಮೂರೂ ದಳಗಳ ಯೋಧರು ತಮ್ಮ ಸಾಮರ್ಥ್ಯ ಪ್ರದರ್ಶನ ತೋರಲಿವೆ. ಇನ್ನು ಇದೇ ಮೊದಲ ಬಾರಿಗೆ ಎನ್ ಎಸ್ ಜಿ ಕಮಾಂಡೋ ಯೋಧರು  ಪರೇಡ್ ನಲ್ಲಿ ಪಾಲ್ಗೊಳ್ಳುತ್ತಿದ್ದು, ವಾಯುಸೇನೆಯ ಪರವಾಗಿ ಇದೇ ಮೊದಲ ಬಾರಿಗೆ ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನಗಳು ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡಲಿವೆ. ಇದಾದ ಬಳಿಕ ಪರೇಡ್ ನಲ್ಲಿ 17 ರಾಜ್ಯಗಳ  ಸಂಸ್ಕೃತಿ ಬಿಂಬಿಸುವ ಸ್ತಬ್ದಚಿತ್ರಗಳು ಮೆರವಣಿಗೆ ನಡೆಸಲಿದ್ದು, ಇದಲ್ಲದೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ಸ್ಥಬ್ದ ಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ಗಣರಾಜ್ಯೋತ್ಸವದ ವಿಶೇಷ ಅತಿಥಿಯಾಗಿ ಆಗಮಿಸಿರುವ ಅಬುಧಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಅವರು ಕೂಡ ದೆಹಲಿಯ ರಾಜ್ ಪಥ್ ಗೆ ಆಗಮಿಸಿದ್ದು, ಕೇಂದ್ರ ಸರ್ಕಾರದ ವಿವಿಧ ಅಧಿಕಾರಿಗಳು  ಯುವರಾಜನನ್ನು ಸ್ವಾಗತಿಸಿದ್ದಾರೆ. ಇದೇ ವೇಳೆ ವೀರಮರಣವನ್ನಪ್ಪಿದ ಭಾರತೀಯ ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ವಂದನೆ ಸಲ್ಲಿಸಿದರು. ದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್  ಜ್ಯೋತಿಗೆ ನಮನ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ಗೌರವ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂರು ದಳದ ಸೇನಾ ಮುಖ್ಯಸ್ಥರು ಸಾಥ್ ನೀಡಿದರು.

ಇನ್ನು ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮಾಚರಣೆಯಲ್ಲಿ ಕೇಂದ್ರ ಸಚಿವರು, ಭಾರತೀಯ ಸೇನೆಯ ವಿವಿಧ ಗಣ್ಯರು ಹಾಗೂ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT