ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮಾಚರಣೆಗೆ ಆಗಮಿಸಿದ ಪ್ರಧಾನಿ ಮೋದಿ 
ಪ್ರಧಾನ ಸುದ್ದಿ

ಉಗ್ರ ದಾಳಿ ಆತಂಕದ ನಡುವೆಯೇ 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಆರಂಭ!

ರಾಷ್ಟ್ರರಾಜಧಾನಿ ದೆಹಲಿಯಲ್ಲಿ 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಚಾಲನೆ ನೀಡಲಾಗಿದ್ದು, ಉಗ್ರ ದಾಳಿ ಆತಂಕದ ನಡುವೆಯೇ ಸಂಭ್ರಮಾಚರಣೆಯ ಕೇಂದ್ರ ಬಿಂದು ಪರೇಡ್ ಮತ್ತು ಸ್ಛಬ್ದ ಚಿತ್ರ ಮೆರಣಿಗೆಗೆ ಚಾಲನೆ ನೀಡಲಾಗಿದೆ.

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಚಾಲನೆ ನೀಡಲಾಗಿದ್ದು, ಉಗ್ರ ದಾಳಿ ಆತಂಕದ ನಡುವೆಯೇ ಸಂಭ್ರಮಾಚರಣೆಯ ಕೇಂದ್ರ ಬಿಂದು ಪರೇಡ್ ಮತ್ತು ಸ್ಛಬ್ದ ಚಿತ್ರ ಮೆರಣಿಗೆಗೆ ಚಾಲನೆ ನೀಡಲಾಗಿದೆ.

ಮೆರಣಿಗೆಯಲ್ಲಿ ಸೇನೆಯ ಶಕ್ತಿ ಪ್ರದರ್ಶನ ಮಾಡಲಾಗುತ್ತಿದ್ದು, ಭಾರತೀಯ ಸೇನೆಯ ಮೂರೂ ದಳಗಳ ಯೋಧರು ತಮ್ಮ ಸಾಮರ್ಥ್ಯ ಪ್ರದರ್ಶನ ತೋರಲಿವೆ. ಇನ್ನು ಇದೇ ಮೊದಲ ಬಾರಿಗೆ ಎನ್ ಎಸ್ ಜಿ ಕಮಾಂಡೋ ಯೋಧರು  ಪರೇಡ್ ನಲ್ಲಿ ಪಾಲ್ಗೊಳ್ಳುತ್ತಿದ್ದು, ವಾಯುಸೇನೆಯ ಪರವಾಗಿ ಇದೇ ಮೊದಲ ಬಾರಿಗೆ ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನಗಳು ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡಲಿವೆ. ಇದಾದ ಬಳಿಕ ಪರೇಡ್ ನಲ್ಲಿ 17 ರಾಜ್ಯಗಳ  ಸಂಸ್ಕೃತಿ ಬಿಂಬಿಸುವ ಸ್ತಬ್ದಚಿತ್ರಗಳು ಮೆರವಣಿಗೆ ನಡೆಸಲಿದ್ದು, ಇದಲ್ಲದೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ಸ್ಥಬ್ದ ಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ಗಣರಾಜ್ಯೋತ್ಸವದ ವಿಶೇಷ ಅತಿಥಿಯಾಗಿ ಆಗಮಿಸಿರುವ ಅಬುಧಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಅವರು ಕೂಡ ದೆಹಲಿಯ ರಾಜ್ ಪಥ್ ಗೆ ಆಗಮಿಸಿದ್ದು, ಕೇಂದ್ರ ಸರ್ಕಾರದ ವಿವಿಧ ಅಧಿಕಾರಿಗಳು  ಯುವರಾಜನನ್ನು ಸ್ವಾಗತಿಸಿದ್ದಾರೆ. ಇದೇ ವೇಳೆ ವೀರಮರಣವನ್ನಪ್ಪಿದ ಭಾರತೀಯ ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ವಂದನೆ ಸಲ್ಲಿಸಿದರು. ದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್  ಜ್ಯೋತಿಗೆ ನಮನ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ಗೌರವ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂರು ದಳದ ಸೇನಾ ಮುಖ್ಯಸ್ಥರು ಸಾಥ್ ನೀಡಿದರು.

ಇನ್ನು ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮಾಚರಣೆಯಲ್ಲಿ ಕೇಂದ್ರ ಸಚಿವರು, ಭಾರತೀಯ ಸೇನೆಯ ವಿವಿಧ ಗಣ್ಯರು ಹಾಗೂ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ

ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್: ಇನ್ಮುಂದೆ ತಮ್ಮ ಹೆಸರಿನ ಮುಂದೆ 'Tr' ಬಳಸುವ ಅವಕಾಶ!

1,322 ಕೋಟಿ ರೂ. ವಂಚನೆ ಪ್ರಕರಣ: Zee ಮಾಲೀಕ ಸುಭಾಷ್ ಚಂದ್ರ ವಿರುದ್ಧ FIR ದಾಖಲಿಸಿದ ಸಿಬಿಐ!

ಹಲ್ಲೆ ಆರೋಪ: ಒಂದು ದಿನದ ಪೊಲೀಸ್ ಕಸ್ಟಡಿಗೆ ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್‌!