ಮಮತಾ ಬ್ಯಾನರ್ಜಿ 
ಪ್ರಧಾನ ಸುದ್ದಿ

ನೇತಾಜಿ ಸಾವಿನ ಬಗ್ಗೆ ಆರ್ ಟಿ ಐ ಮಾಹಿತಿ: ಆಘಾತ ವ್ಯಕ್ತ ಪಡಿಸಿದ ಮಮತಾ ಬ್ಯಾನರ್ಜಿ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವಿನ ಬಗ್ಗೆ ಆರ್ ಟಿಐ ನೀಡಿರುವ ಮಾಹಿತಿ ತುಂಬಾ ಆಘಾತವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ..

ಕೊಲ್ಕೋತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವಿನ ಬಗ್ಗೆ ಆರ್ ಟಿಐ ನೀಡಿರುವ ಮಾಹಿತಿ ತುಂಬಾ ಆಘಾತವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ನೇತಾಜಿ ಈ ಮಣ್ಣಿನ ಮಗ, ನಮ್ಮ ರಾಜ್ಯ ಹಾಗೂ ನಮ್ಮ ದೇಶ ಮತ್ತು ಪ್ರಪಂಚಕ್ಕೆ ಹೆಮ್ಮೆಯ ವ್ಯಕ್ತಿ. ಹೀಗಿರುವಾಗ ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಏಕಪಶ್ರೀಯ ನಿರ್ಧಾರದಿಂದ ನನಗೆ ಆಘಾತವಾಗಿದೆ ಎಂದು ತಮ್ಮ ಫೇಸ್ ಬುಕ್ ನಲ್ಲಿ ಮಮತಾ ಪೋಸ್ಟ್ ಹಾಕಿದ್ದಾರೆ.
ಈ ವಿಷಯ ಸಂಬಂಧ ನಾನು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರ ಗಮನ ಸೆಳೆಯಲು ಬಯಸುತ್ತೇನೆ. ಅದನ್ನು ಇಲ್ಲಿ ನಿಮ್ಮ ಜೊತೆ ನಾನು ಹಂಚಿಕೊಳ್ಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಸಾವನ್ನಪ್ಪಿದ್ದಾರೆ ಹೇಳಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT