ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ನಜೀಬ್ ಅಹ್ಮದ್ ಪ್ರಕರಣ; ಜೆ ಎನ್ ಯುಗೆ ಭೇಟಿ ನೀಡಿದ ಸಿಬಿಐ

ಆಡಳಿತ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಭೇಟಿ ಮಾಡಲು ಸಿಬಿಐ ಅಧಿಕಾರಿಗಳು ಸೋಮವಾದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು. ಕಳೆದ ಅಕ್ಟೋಬರ್ ನಲ್ಲಿ ಜೆ ಎನ್ ಯು

ನವದೆಹಲಿ: ಆಡಳಿತ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಭೇಟಿ ಮಾಡಲು ಸಿಬಿಐ ಅಧಿಕಾರಿಗಳು ಸೋಮವಾದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು. ಕಳೆದ ಅಕ್ಟೋಬರ್ ನಲ್ಲಿ ಜೆ ಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಕಾಣೆಯಾದ ಪ್ರಕರಣ ಕುರಿತ ತನಿಖೆ ಇದಾಗಿದೆ. 
ಕಳೆದ ೧೦ ದಿನಗಳಲ್ಲಿ ಸಿಬಿಐ ವಿಶ್ವವಿದ್ಯಾಲಯಕ್ಕೆ ನಾಲ್ಕು ಬಾರಿ ಭೇಟಿ ನೀಡಿದೆ. ದೆಹಲಿ ಪೊಲೀಸರಿಗೆ ಈ ಪ್ರಕರಣದಲ್ಲಿ ಯಾವುದೇ ಸುಳಿವು ಪತ್ತೆಹಚ್ಚಲು ಸಾಧ್ಯವಾಗದೆ ಹೋದದ್ದರಿಂದ, ದೆಹಲಿ ಹೈಕೋರ್ಟ್ ಇದನ್ನು ಸಿಬಿಐಗೆ ವರ್ಗಾಯಿಸಿತ್ತು. ಸಿಬಿಐ ಜೂನ್ ೩ ರಂದು ಈ ಪ್ರಕರಣದಲ್ಲಿ ಆರೋಪಪಟ್ಟಿ ಸಿದ್ಧಪಡಿಸಿತ್ತು. 
ನಜೀಬ್ ೨೭ ವರ್ಷದ ಎಂ ಎಸ್ ಸಿ ವಿದ್ಯಾರ್ಥಿ ಅಕ್ಟೋಬರ್ ೧೪-೧೫ ರ ಮಧ್ಯರಾತ್ರಿಯಿಂದ ಜೆ ಎನ್ ಯು ಹಾಸ್ಟೆಲ್ ನಿಂದ ಕಾಣೆಯಾಗಿದ್ದಾರೆ. ಇದಕ್ಕೂ ಮೊದಲು ರಾಷ್ಟ್ರೀಯ ಸ್ವಯಂಸೇವಕ ದಳದ ವಿದ್ಯಾರ್ಥಿ ಘಟಕ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಸದಸ್ಯರು ನಜೀಬ್ ಜೊತೆಗೆ ಗಲಾಟೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು. 
ನಜೀಬ್ ಕಾಣೆಯಾಗಿರುವುದಕ್ಕೆ ತಮ್ಮ ಯಾವುದೇ ಕೈವಾಡ ಇಲ್ಲ ಎಂದು ಆರೋಪವನ್ನು ಎಬಿಪಿವಿ ಅಲ್ಲಗೆಳೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT