ರಾಮ್ ನಾಥ್ ಕೋವಿಂದ್ 
ಪ್ರಧಾನ ಸುದ್ದಿ

ಕೋವಿಂದ್ ಅವರಿಗೆ ಬೆಂಬಲ ಘೋಷಿಸಲಿರುವ ಜೆಡಿಯು: ಶಾಸಕ

ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡಲು ಬಿಹಾರದ ಆಡಳಿತ ಪಕ್ಷ ಸಂಯುಕ್ತ ಜನತಾ ದಳ ನಿರ್ಧರಿಸಿದೆ ಎಂದು ಜೆಡಿಯು ಶಾಸಕ ರತ್ನೇಶ್ ಸಾದಾ ಬುಧವಾರ

ಪಾಟ್ನಾ: ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡಲು ಬಿಹಾರದ ಆಡಳಿತ ಪಕ್ಷ ಸಂಯುಕ್ತ ಜನತಾ ದಳ ನಿರ್ಧರಿಸಿದೆ ಎಂದು ಜೆಡಿಯು ಶಾಸಕ ರತ್ನೇಶ್ ಸಾದಾ ಬುಧವಾರ ಹೇಳಿದ್ದಾರೆ. 
ಸಾಂಬಾರ್ಷ ಕ್ಷೇತ್ರವನ್ನು ಪ್ರತಿನಿಧಿಸುವ ಸಾದಾ "ಕೋವಿಂದ್ ಅವರಿಗೆ ಬೆಂಬಲ ನೀಡಲು ಪಕ್ಷ ನಿರ್ಧರಿಸಿದೆ. ಶಾಸಕರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ. 
ನೆರೆದಿದ್ದ ಶಾಸಕರಿಗೆ "ಕೋವಿಂದ್ ಒಳ್ಳೆಯ ಮನುಷ್ಯ" ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾಗಿ ಸಾದಾ ಹೇಳಿದ್ದಾರೆ. 
ಶಾಸಕರ ಜೊತೆಗೆ ಇನ್ನಷ್ಟು ಸುತ್ತಿನ ಮಾತುಕತೆಗಳು ನಡೆಯಲಿದ್ದು, ಬುಧವಾರ ತಡವಾಗಿ ಅಥವಾ ಗುರುವಾರ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. 
ನಿತೀಶ್ ಕುಮಾರ್ ಅವರ ನಿರ್ಧಾರಕ್ಕೆ ಒಮ್ಮತವಾಗಿ ಒಪ್ಪಿಕೊಳ್ಳುವುದಾಗಿ ಶಾಸಕರು ಹೇಳಿರುವುದಾಗಿ ಕೂಡ ಸಾದಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT