ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದೆಹಲಿ ವಿಶ್ವವಿದ್ಯಾಲಯ ಮತ್ತೆ ಪ್ರತಿಭಟನೆ; ಈಗ ಎಬಿವಿಪಿ ಸರದಿ

ದೆಹಲಿ ವಿಶ್ವವಿದ್ಯಾಲಯದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಕಾರ್ಯಕರ್ತರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಇದೆ ವೇಳೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಕ್ರಮ

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಕಾರ್ಯಕರ್ತರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಇದೆ ವೇಳೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. 
ದೆಹಲಿ ವಿಶ್ವವಿದ್ಯಾಲಯವನ್ನು 'ದೇಶವಿರೋಧಿ ಚಟುವಟಿಕೆಗಳಿಂದ ರಕ್ಷಿಸಲು' ಆರ್ಟ್ ಫ್ಯಾಕಲ್ಟಿ ವಿಭಾಗದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿದ್ಯಾರ್ಥಿ ಘಟಕ ತಿಳಿಸಿದೆ. 
'ಅರಾಜಕತೆ ಮತ್ತು ಭಾರತ ವಿರೋಧಿ ಅಭಿಯಾನ' ಬೆಂಬಲಿಸುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. 
ದೆಹಲಿ ವಿಶ್ವವಿದ್ಯಾಲಯದ ರಾಜಮಾಸ್ ಕಾಲೇಜಿನಲ್ಲಿ ಫೆಬ್ರವರಿ ೨೨ ರಂದು ಎಬಿವಿಪಿ ಮತ್ತು ಎಡ ಪಕ್ಷಗಳಿಗೆ ಸಂಬಂಧಿಸಿದ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಸಿಎ) ಕಾರ್ಯಕರ್ತರ ನಡುವೆ ಘರ್ಷಣೆಗೆ ಕಾರಣವಾಗಿತ್ತು. ಎಬಿವಿಪಿ ಹಿಂಸಾಚಾರವನ್ನು ವಿರೋಧಿಸಿ ಕೆಲವು ದಿನಗಳ ಹಿಂದೆ ಎಐಸಿಎ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ಹಿಂಸೆಯ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಇಬ್ಬರು ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT