ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದೆಹಲಿ ವಿಶ್ವವಿದ್ಯಾಲಯ ಮತ್ತೆ ಪ್ರತಿಭಟನೆ; ಈಗ ಎಬಿವಿಪಿ ಸರದಿ

ದೆಹಲಿ ವಿಶ್ವವಿದ್ಯಾಲಯದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಕಾರ್ಯಕರ್ತರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಇದೆ ವೇಳೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಕ್ರಮ

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಕಾರ್ಯಕರ್ತರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಇದೆ ವೇಳೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. 
ದೆಹಲಿ ವಿಶ್ವವಿದ್ಯಾಲಯವನ್ನು 'ದೇಶವಿರೋಧಿ ಚಟುವಟಿಕೆಗಳಿಂದ ರಕ್ಷಿಸಲು' ಆರ್ಟ್ ಫ್ಯಾಕಲ್ಟಿ ವಿಭಾಗದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿದ್ಯಾರ್ಥಿ ಘಟಕ ತಿಳಿಸಿದೆ. 
'ಅರಾಜಕತೆ ಮತ್ತು ಭಾರತ ವಿರೋಧಿ ಅಭಿಯಾನ' ಬೆಂಬಲಿಸುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. 
ದೆಹಲಿ ವಿಶ್ವವಿದ್ಯಾಲಯದ ರಾಜಮಾಸ್ ಕಾಲೇಜಿನಲ್ಲಿ ಫೆಬ್ರವರಿ ೨೨ ರಂದು ಎಬಿವಿಪಿ ಮತ್ತು ಎಡ ಪಕ್ಷಗಳಿಗೆ ಸಂಬಂಧಿಸಿದ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಸಿಎ) ಕಾರ್ಯಕರ್ತರ ನಡುವೆ ಘರ್ಷಣೆಗೆ ಕಾರಣವಾಗಿತ್ತು. ಎಬಿವಿಪಿ ಹಿಂಸಾಚಾರವನ್ನು ವಿರೋಧಿಸಿ ಕೆಲವು ದಿನಗಳ ಹಿಂದೆ ಎಐಸಿಎ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ಹಿಂಸೆಯ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಇಬ್ಬರು ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!