ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಶಿರಚ್ಛೇಧಕ್ಕೆ ಕರೆ ನೀಡಿದ ಆರ್ ಎಸ್ ಎಸ್ ಮುಖಂಡ ಕುಂದನ್ ಚಂದ್ರಾವತ್ 
ಪ್ರಧಾನ ಸುದ್ದಿ

ಕೇರಳ ಮುಖ್ಯಮಂತ್ರಿ ತಲೆ ಕಡಿಯುವಂತೆ ಆರ್ ಎಸ್ ಎಸ್ ಕಾರ್ಯಕರ್ತನ ಕರೆ; ಕ್ರಮಕ್ಕೆ ಸಿಪಿಐ-ಎಂ ಆಗ್ರಹ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಶಿರಚ್ಛೇಧಕ್ಕೆ ಒಂದು ಕೋಟಿ ಬಹುಮಾನ ಘೋಷಿಸಿರುವ ಆರ್ ಎಸ್ ಎಸ್ ಮುಖಂಡನ ಬಗ್ಗೆ ಮೌನವಾರಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು

ನವದೆಹಲಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಶಿರಚ್ಛೇಧಕ್ಕೆ ಒಂದು ಕೋಟಿ ಬಹುಮಾನ ಘೋಷಿಸಿರುವ ಆರ್ ಎಸ್ ಎಸ್ ಮುಖಂಡನ ಬಗ್ಗೆ ಮೌನವಾರಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರುವಾರ ಸಿಪಿಐ-ಎಂ ಪ್ರಶ್ನಿಸಿದೆ. 
ಕೇರಳದಲ್ಲಿ ೩೦೦ ಆರ್ ಎಸ್ ಎಸ್ ಕಾರ್ಯಕರ್ತರ ಕೊಲೆಗೆ ವಿಜಯನ್ ಕಾರಣ ಎಂದು ಆರೋಪಿಸಿ, ಮಧ್ಯಪ್ರದೇಶದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಕುಂದನ್ ಚಂದ್ರಾವತ್ ಎಂಬ ವ್ಯಕ್ತಿ ಎಡ ಪಕ್ಷದ ಮುಖ್ಯಮಂತ್ರಿಯವರ ಶಿರಚ್ಛೇಧ ಮಾಡಿದವರಿಗೆ ತನ್ನೆಲ್ಲಾ ಆಸ್ತಿ ಮಾರಿ ಒಂದು ಕೋಟಿ ರೂ ನೀಡುವುದಾಗಿ ಘೋಷಿಸಿದ್ದರು. 
ಉಜ್ಜಯಿನ್ ನಲ್ಲಿ ಆರ್ ಎಸ್ ಎಸ್ ಮುಖಂಡ ನೀಡಿರುವ ಈ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು. 
"ಆರ್ ಎಸ್ ಎಸ್ ಭಯೋತ್ಪಾದಕ ಸಂಸ್ಥೆ ಎಂಬ ನಿಜ ಬಣ್ಣ ಇದರಿಂದ ಬಯಲಾಗಿದೆ. ಈಗಲಾದರೂ ಪ್ರಧಾನಿ ಮತ್ತು ಅವರ ಸರ್ಕಾರ ಮೌನವಾಗಿರದೆ ಕ್ರಮ ತೆಗೆದುಕೊಳ್ಳುವುದೇ?" ಎಂದು ಸಿಪಿಐ-ಎಂನ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಪ್ರಶ್ನಿಸಿದ್ದಾರೆ. 
"ಆರ್ ಎಸ್ ಎಸ್ ವಿರುದ್ಧ ಶಿಸ್ತು ಕ್ರಮಕ್ಕೆ ಸಿಪಿಐ-ಎಂ ಆಗ್ರಹಿಸುತ್ತಿದೆ. ಕೇಂದ್ರ ಮತ್ತು ಮಧ್ಯಪ್ರದೇಶ ಸರ್ಕಾರಗಳು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತವೆಯೇ? ಅವರು ಹೊರಬಂದು ಇದನ್ನು ಖಂಡಿಸಲಿದ್ದಾರೆಯೇ?" ಎಂದು ಸಿಪಿಐ-ಎಂ ಪ್ರಶ್ನಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT