ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ವಿವಿಗಳು ಚರ್ಚೆಯ ಸ್ಥಳವಾಗಲಿ, ಹಿಂಸೆಗಲ್ಲ: ಪ್ರಣಬ್ ಮುಖರ್ಜಿ

ವಿಶ್ವವಿದ್ಯಾಲಯಗಳು ಚರ್ಚೆಯ ಸ್ಥಳವಾಗಲಿ. ಅಲ್ಲಿ ಹಿಂಸಾಚಾರಕ್ಕೆ ಅವಕಾಶ ನೀಡಬೇಡಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ....

ಕೊಚ್ಚಿ: ವಿಶ್ವವಿದ್ಯಾಲಯಗಳು ಚರ್ಚೆಯ ಸ್ಥಳವಾಗಲಿ. ಅಲ್ಲಿ ಹಿಂಸಾಚಾರಕ್ಕೆ ಅವಕಾಶ ನೀಡಬೇಡಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಗುರುವಾರ ಹೇಳಿದ್ದಾರೆ.
ಕೆ.ಎಸ್ ರಾಜಮೋನಿ ಸ್ಮಾರಕ ಉಪನ್ಯಾಶ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಣಬ್ ಮುಖರ್ಜಿ ಅವರು, ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಮುಕ್ತ ವಿಚಾರ ವಿನಿಮಯಕ್ಕೆ ಅವಕಾಶವಿರಲಿ. ವಿದ್ಯಾರ್ಥಿಗಳು ಮತ್ತು ಉಪನ್ಯಾಶಕರು ಸಂಸ್ಕೃತಿಯ ಹೆಸರಿನಲ್ಲಿ ಅಶಾಂತಿಗೆ ಪ್ರೋತ್ಸಾಹ ನೀಡುವ ಬದಲು ಉತ್ತಮ ಚರ್ಚೆಯಲ್ಲಿ ತೊಡಗಿ ಎಂದು ಕರೆ ನೀಡಿದ್ದಾರೆ.
ಈ ಹಿಂದೆ ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳು ದೇಶದಲ್ಲಿ ಜ್ಞಾನ ಸಮಾಜವನ್ನು ಸೃಷ್ಟಿಸಿದ್ದವು. ಆದರೆ ಈಗ ವಿವಿಗಳ ವಿದ್ಯಾರ್ಥಿಗಳು ಪರಸ್ಪರ ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿರುವುದು ವಿಷಾದಕರ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಇತ್ತೀಚಿಗೆ ದೆಹಲಿ ವಿಶ್ವವಿದ್ಯಾಲಯದಲ್ಲಿ ಇತ್ತೀಚಿಗೆ ಆರ್ಎಸ್ಎಸ್ ಬೆಂಬಲಿತ ಎಬಿವಿಪಿ ಹಾಗೂ ಎಡರಂಗ ಬೆಂಬಲಿತ ಎಐಎಸ್ ಎ ಬೆಂಬಲಗರ ನಡುವೆ ತೀವ್ರ ಘರ್ಷಣೆ ನಡೆದಿತ್ತು. ಇದು ರಾಷ್ಟ್ರೀಯವಾದಕ್ಕೆ ಸಂಬಂಧಿಸಿದಂತೆ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT